Advertisement

ನಡು ರಸ್ತೆಯಲ್ಲೇ ಚಾಕುವಿನಿಂದ‌ ಇರಿದು ಯುವಕನ ಬರ್ಬರ ಹತ್ಯೆ

07:41 PM Nov 26, 2021 | Team Udayavani |

ಸೇಡಂ: ಯುವಕನೊಬ್ಬನನ್ನು ನಡು ರಸ್ತೆಯಲ್ಲೇ ಜನರೆದುರೇ ಚಾಕುವಿನಿಂದ‌ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿ ಸಮೀಪ‌ ಶುಕ್ರವಾರ ಜರುಗಿದೆ.

Advertisement

ಊಡಗಿ ರಸ್ತೆ ನಿವಾಸಿ ಕಿರಣ ಎಂಬ ೨೧ ವರ್ಷ ಪ್ರಾಯದ ಯುವಕ ಹತ್ಯೆಗೀಡಾದವ.

ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.

ದಾಳಿ ಬಳಿಕ ತೀವ್ರ ರಕ್ತಸ್ರಾವದಿಂದ ನರಳುತ್ತಿದ್ದ ಯುವಕನನ್ನು ಸ್ಥಳೀಯ ಯುವಕರು ಆಸ್ಪತ್ರೆಗೆ ದಾಖಲಿಸಿದರಾದರೂ ಬದುಕಿಸಲು ಸಾಧ್ಯವಾಗಲಿಲ್ಲ.

ಕೊಲೆ ನಡೆದ ಸ್ಥಳದಲ್ಲಿ ಚೂಪಾದ ಎರಡು ಚಾಕುಗಳು ದೊರೆತಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Advertisement

ಘಟನೆಯಿಂದ ಪಟ್ಟಣದ ನಿವಾಸಿಗಳು ಆತಂಕಗೊಂಡಿದ್ದು, ಸ್ಥಳಕ್ಕೆ ಪಿಎಸ್ಐ ಸೋಮಲಿಂಗ ಒಡೆಯರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸೇಡಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next