Advertisement

ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ 4ನೇ ಮಹಡಿಯಿಂದ ಬಿದ್ದು ಯುವಕ ದುರ್ಮರಣ

11:34 AM May 25, 2023 | Team Udayavani |

ಬೆಂಗಳೂರು: ಪ್ರಕರಣವೊಂದರಲ್ಲಿ ಬಂಧಿಸಲು ಹೋದಾಗ ಪೊಲೀಸರ ಕಂಡ ಯುವಕನೊಬ್ಬ ತಪ್ಪಿಸಿಕೊಳ್ಳುವ ಭರದಲ್ಲಿ ನಾಲ್ಕನೇ ಮಹಡಿಯಿಂದ ಜಿಗಿದು ಮೃತಪಟ್ಟಿರುವ ಘಟನೆ ಬೊಮ್ಮನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಬೊಮ್ಮನಹಳ್ಳಿ ನಿವಾಸಿ ಮೊಹಮ್ಮದ್‌ ಹುಸೇನ್‌(31) ಮೃತ ಯುವಕ.

ಮೊಹಮ್ಮದ್‌ ಹುಸೇನ್‌ ವಿರುದ್ಧ ಸ್ಥಳೀಯ ಯುವತಿಗೆ ಬೆದರಿಕೆ ಹಾಕಿದ ಆರೋಪ ಸಂಬಂಧ ಆಕೆಯ ಪೋಷಕರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಬುಧವಾರ ಸಂಜೆ 7 ಗಂಟೆ ಸುಮಾರಿಗೆ ಬೊಮ್ಮನಹಳ್ಳಿಯ ಬೇಗೂರು ರಸ್ತೆಯಲ್ಲಿರುವ ಮನೆಯಲ್ಲಿ ಆತನನ್ನು ವಶಕ್ಕೆ ಪಡೆಯಲು ಬೊಮ್ಮನಹಳ್ಳಿ ಠಾಣೆಯ ನಾಲ್ವರು ಸಿಬ್ಬಂದಿ ಹೋಗಿದ್ದರು. ಪೊಲೀಸರ ಕಂಡ ಮೊಹಮ್ಮದ್‌ ಹುಸೇನ್‌, ಮನೆಯ ನಾಲ್ಕನೇ ಮಹಡಿಯಿಂದ ಜಿಗಿದು, ಕೆಳಗೆ ಬಿದ್ದು ಮೃತಪಟ್ಟಿದ್ದಾನೆ. ಜಿಗಿಯುವಾಗ ಅರೆ ಬೆತ್ತಲಾಗಿದ್ದ ಎಂದು ಹೇಳಲಾಗಿದೆ.

ಮೊಹಮ್ಮದ್‌ ಹುಸೇನ್‌ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಬಳಿಕ ಕುಟುಂಬ ಸದಸ್ಯರಿಗೆ ಹತ್ತಾಂತರಿಸಲಾಗುತ್ತದೆ ಎಂದು ಪೊಲೀಸರು ಹೇಳಿದರು.

ಬೊಮ್ಮನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. “ಪೊಲೀಸರೇ ಹಲ್ಲೆ ನಡೆಸಿ ತಮ್ಮ ಪುತ್ರ ನನ್ನು ಕೊಂದಿದ್ದಾರೆ’ ಎಂದು ಮೊಹಮದ್‌ ಹುಸೇನ್‌ ಪೋಷಕರು ಆರೋಪಿಸಿದ್ದಾರೆ.

Advertisement

ಘಟನೆ ಸಂಬಂಧ ಸ್ಥಳಕ್ಕೆ ಸ್ಥಳೀಯ ಶಾಸಕ ಸತೀಶ್‌ ರೆಡ್ಡಿ ಭೇಟಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next