ಬೆಂಗಳೂರು: ಕಾರಿಗೆ ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೈಗ್ರೌಂಡ್ಸ್ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ವೈಯಾಲಿಕಾವಲ್ನ ಮುನೇಶ್ವರ ಬ್ಲಾಕ್ ನಿವಾಸಿ ಎಸ್.ವಿನಯ್ (17) ಮೃತ ಸವಾರ. ಆತನ ಸ್ನೇಹಿತ 17 ವರ್ಷದ ಹಿಂಬದಿ ಸವಾರ ಗಂಭೀರವಾಗಿ ಗಾಯ ಗೊಂಡಿದ್ದಾನೆ.
ಭಾನುವಾರ ಮುಂಜಾನೆ 1 ಗಂಟೆ ಸುಮಾರಿಗೆ ಶೇಷಾದ್ರಿಪು ರದ ಮಂತ್ರಿ ಮಾಲ್ ಸಮೀಪದ ಜೈಭೀಮಾನಗರ ಕಡೆಯಿಂದ ಶ್ರೇಷಾದ್ರಿಪುರಂ 2ನೇ ಮುಖ್ಯರಸ್ತೆ ಕಡೆಗೆ ದ್ವಿಚಕ್ರ ವಾಹನ ಚಾಲನೆ ಮಾಡಿಕೂಂಡು ಹೋಗುವಾಗ ಮಾರ್ಗದ ಶ್ರೀಸಾಗರ್ ಹೋಟೆಲ್ ಬಳಿ ಅಪ ಘಾತ ಸಂಭವಿಸಿದೆ ಎಂದು ಸಂಚಾರ ಪೊಲೀಸರು ಹೇಳಿದರು.
ಮೃತ ಸವಾರ ವಿನಯ್ ಮತ್ತು ಗಾಯಾಳು ಹಿಂಬದಿ ಸವಾರ ಸಣ್ಣಪುಟ್ಟ ವ್ಯಾಪಾರ ಮಾಡುತ್ತಿದ್ದರು. ಭಾನುವಾರ ರಾತ್ರಿ ತಮ್ಮ ಏರಿಯಾದಲ್ಲಿ ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಳಿಕ ಬೈಕ್ನಲ್ಲಿ ಶೇಷಾದ್ರಿಪುರಂ ಕಡೆಗೆ ಬರುತ್ತಿದ್ದರು. ಈ ವೇಳೆ ವೇಗವಾಗಿ ಚಾಲನೆ ಮಾಡಿದ ಪರಿಣಾಮ ನಿಯಂತ್ರಣ ತಪ್ಪಿ ತಮ್ಮ ಬಲಭಾಗದಲ್ಲಿ ಬರುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯ ರಭಸಕ್ಕೆ ಸವಾರರಿಬ್ಬರು ದ್ವಿಚಕ್ರ ವಾಹನ ಸಹಿತ ರಸ್ತೆಗೆ ಬಿದ್ದಿದ್ದಾರೆ. ಹೆಲ್ಮೆಟ್ ಧರಿಸದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯ ಗೊಂಡಿದ್ದರು. ಕೂಡಲೇ ಪೊಲೀಸರು ಗಾಯಾಳುಗಳನ್ನು ನಿಮ್ಹಾನ್ಸ್ ಆಸ್ಪತ್ರೆಗೆ ಸಾಗಿಸಿದ್ದಾರೆ. ತಲೆಗೆ ತೀವ್ರ ಪೆಟ್ಟು ಬಿದ್ದು ರಕ್ತಸ್ರಾವವಾಗಿದ್ದ ಪರಿಣಾಮ ವಿನಯ್ ಚಿಕಿತ್ಸೆ ಫಲಿಸದೆ ಮುಂಜಾನೆ 4.30ರ ಸುಮಾ ರಿಗೆ ಮೃತಪಟ್ಟಿದ್ದಾನೆ ಎಂದು ಸಂಚಾರ ಪೊಲೀಸರು ಹೇಳಿದರು.