Advertisement

ಯುವಕರೇ ಟಿಪ್ಪು ಧೈರ್ಯ ಕಲಿಯಿರಿ

09:57 AM Nov 11, 2017 | Team Udayavani |

ಕಲಬುರಗಿ: ಬ್ರಿಟಿಷರ ವಿರುದ್ಧ ಹೋರಾಟ ಮಾಡಿ ಅವರ ನಿದ್ದೆಗೆಡಿಸಿದ್ದ ಧೈರ್ಯಶಾಲಿ ಹಾಗೂ ಕುಶಾಗ್ರಮತಿ ಟಿಪ್ಪು ಸುಲ್ತಾನ್‌ನ ಧೈರ್ಯ ಮತ್ತು ಸ್ವಾಭಿಮಾನವನ್ನುಯುವಕರು ಕಲಿಯಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಹೇಳಿದರು.

Advertisement

ಎಸ್‌.ಎಂ.ಪಂಡಿತ ರಂಗಮಂದಿರದಲ್ಲಿ ಶುಕ್ರವಾರ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಹಜರತ್‌ ಟಿಪ್ಪು ಸುಲ್ತಾನ್‌ ಜಯಂತಿ ಕಾರ್ಯಕ್ರಮವನ್ನು ಟಿಪ್ಪು ಸುಲ್ತಾನ್‌ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. 

ಟಿಪ್ಪು ನಿಲುವು, ಸ್ವಾಭಿಮಾನ ಹಾಗೂ ಆಡಳಿತ ಸುಧಾರಣಾ ಕ್ರಮ ಹಾಗೂ ಸಹೋದರತ್ವವನ್ನು ಮನಗಂಡು ರಾಜ್ಯ ಸರಕಾರ ಇವತ್ತು ಟಿಪ್ಪು ಜಯಂತಿ ಮಾಡಲು ಹೊರಟಿದೆ. ಆದರೆ, ಕೆಲವರು ಇದನ್ನು ವಿರೋಧಿಸಿದ್ದಾರೆ. ಅದೆಲ್ಲವೂ ಅವರವರ ಮನೋಭಾವ. ತನ್ನ ಇಡೀ ಜೀವನವನ್ನೇ ನಾಡಿನ ಏಳಿಗೆಗಾಗಿ ಮುಡಿಪಾಗಿಟ್ಟು ಶೌರ್ಯ, ಸಾಹಸಕ್ಕೆ ಹೆಸರಾಗಿ ಸಹಿಷ್ಣತೆ ರುವಾರಿಯಾಗಿದ್ದ ಟಿಪ್ಪು ಸುಲ್ತಾನ್‌ ಸ್ವಾತಂತ್ರ್ಯಪೂರ್ವ ದೇಶ ಕಂಡ ಅಪ್ರತಿಮ ಹೋರಾಟಗಾರ ಎಂದರು.

ಟಿಪ್ಪು ಸುಲ್ತಾನ್‌ ಬ್ರಿಟಿಷ್‌ ಈಸ್ಟ್‌ ಇಂಡಿಯಾ ಕಂಪನಿಯ ಆಡಳಿತದಲ್ಲಿ ನಲುಗುತ್ತಿದ್ದ ಭಾರತವನ್ನು ಅವರ ಕಪಿಮುಷ್ಟಿಯಿಂದ ಬಿಡಿಸಲು ಕನಸು ಕಂಡ ಕಾರಣ ಪುರುಷ, ಬ್ರಿಟಿಷರೊಂದಿಗೆ ನಿರಂತರ ಸೆಣಸಿದ ಛಲಗಾರ, ಹಗಲಿರುಳು ಬ್ರಿಟಿಷರನ್ನು ದುಃಸ್ವಪ್ನದಂತೆ ನಿರಂತರ ಕಾಡಿದ ವೀರ ಯೋಧ, ಅಪ್ಪಟ ದೇಶಪ್ರೇಮಿಯಾಗಿದ್ದರು ಎಂದರು. ಆಡಳಿತ, ಪ್ರಜಾಪ್ರಭುತ್ವ ಮತ್ತು ಜನಪರ ಕಾಳಜಿ ಇಂದಿನ ಯುಕವರು ಅಳವಡಿಸಿಕೊಳ್ಳಬೇಕಾದಂತಹ ವ್ಯಕ್ತಿತ್ವವನ್ನು ಟಿಪ್ಪು ಹೊಂದಿದ್ದರು. ಆದ್ದರಿಂದ ಅವರೊಬ್ಬ ಮೇರು ವ್ಯಕ್ತಿತ್ವ ಹೊಂದಿದ್ದರು ಎಂದರು.

ಉಪನ್ಯಾಸ ನೀಡಿದ ನಿವೃತ್ತ ಪ್ರಾಂಶುಪಾಲ ಮೊಹ್ಮದ್‌ ಅಮಜದ್‌ ಜಾವೀಧ್‌ ಮಾತನಾಡಿ ಟಿಪ್ಪು ಸುಲ್ತಾನ್‌ ಹಿಂದೂ ಧರ್ಮವನ್ನು, ಹಿಂದೂಗಳನ್ನು ಎಷ್ಟೊಂದು ಗೌರವ ಮತ್ತು ಭಕ್ತಿಯಿಂದ ಕಾಣುತ್ತಿದ್ದ ಎಂಬುದಕ್ಕೆ ಅವರು ಒಟ್ಟು 156 ದೇವಸ್ಥಾನಗಳಿಗೆ ಆರ್ಥಿಕ ನೆರವು ನೀಡಿರುವುದೇ ಸಾಕ್ಷಿಯಾಗಿದೆ ಎಂದರು.

Advertisement

ಟಿಪ್ಪು ಸುಲ್ತಾನ್‌ ರ ಹಲವಾರು ಕ್ರಾಂತಿಕಾರಿ ಆಲೋಚನೆಗಳು ಮತ್ತು ಕಾರ್ಯಗಳು ನಮಗೆ ಇಂದಿಗೂ ಮಾದರಿ. ಟಿಪ್ಪು ಸುಲ್ತಾನ್‌ ಸದಾ ಹೊಸ ತಂತ್ರಜ್ಞಾನಕ್ಕೆ ತುಡಿಯುತ್ತಿದ್ದ. ಅವನು ಭಾರತದಲ್ಲಿ ಮೊದಲ ಬಾರಿಗೆ ಸೇನೆಯಲ್ಲಿ ಫ್ರೆಂಚ್‌
ರ ಸಹಾಯದಿಂದ ಕ್ಷಿಪಣಿ ಮತ್ತು ರಾಕೇಟ್‌ಗಳನ್ನು ಬಳಸುವುದರ ಮೂಲಕ ಬ್ರಿಟಿಷರಿಗೆ ಸಿಂಹ ಸ್ವಪ್ನವಾಗಿದ್ದ ಎಂದರು.

ಹಜರತ್‌ ಖಾಜಾ ಬಂದೇ ನವಾಜ್‌ ದರ್ಗಾದ ಸಜ್ಜಾದ್‌ ನಶೀನ್‌ ಡಾ| ಸೈಯದ ಶಹಾ ಖುಸ್ರೋ ಹುಸೇನಿ ಮಾತನಾಡಿ, ಟಿಪ್ಪು ಸುಲ್ತಾನ್‌ ನೇರವಾಗಿ ಹುಲಿಯೊಂದಿಗೆ ಹೋರಾಡಿ ಜಯಶಾಲಿಯಾಗಿ ಮೈಸೂರು ಹುಲಿ ಎಂದು ಪ್ರಖ್ಯಾತರಾಗಿದ್ದು, ಹುಲಿಯನ್ನೇ ತನ್ನ ಲಾಂಛನವನ್ನಾಗಿ ಮಾಡಿಕೊಂಡಿದ್ದರು. ತನ್ನ ರಾಜ್ಯದ ಎಲ್ಲ ಜನತೆಯೊಂದಿಗೆ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳುತ್ತ ಸಂಯಮದಿಂದ ವರ್ತಿಸುತ್ತಿದ್ದ ಸರಳ ವ್ಯಕ್ತಿ ಎಂದರು.

ಮಹಾನಗರ ಪಾಲಿಕೆ ಮಹಾಪೌರ ಶರಣಕುಮಾರ ಮೋದಿ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ಇಲಿಯಾಸ್‌ ಬಾಗವಾನ್‌, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಹ್ಮದ ಅಜಗರ ಚುಲಬುಲ್‌, ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ, ಮಹಾನಗರ ಪಾಲಿಕೆ ಆಯುಕ್ತ ಪಿ. ಸುನೀಲಕುಮಾರ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌. ಶಶಿಕುಮಾರ, ಶಿಷ್ಠಾಚಾರ ತಹಶೀಲ್ದಾರ ಪ್ರಕಾಶ ಚಿಂಚೋಳಿಕರ, ಫರಾಜ್‌ ಉಲ್‌ ಇಸ್ಲಾಂ ಹಾಗೂ ಮತ್ತಿತರರು ಇದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ವಂದಿಸಿದರು.

ಇದೇ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಹೊರತಂದಿರುವ ಮೈಸೂರು ಹುಲಿ ಟಿಪ್ಪು ಸುಲ್ತಾನ್‌ ಕುರಿತ ಕಿರು ಹೊತ್ತಿಗೆಯನ್ನು ಪುಸ್ತಕವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಬಿಡುಗಡೆ
ಮಾಡಿದರು. 

Advertisement

Udayavani is now on Telegram. Click here to join our channel and stay updated with the latest news.

Next