Advertisement

Mangaluru ಬಸ್‌ನಲ್ಲಿ ಯುವತಿಗೆ ಕಿರುಕುಳ; ಪ್ರಕರಣ ದಾಖಲು

09:42 PM Jun 07, 2024 | Team Udayavani |

ಮಂಗಳೂರು: ಬಸ್‌ನಲ್ಲಿ ಯುವತಿಯೋರ್ವಳಿಗೆ ಅಪರಿಚಿತ ಯುವಕನೋರ್ವ ಮಾನಭಂಗ ಮಾಡುವ ಉದ್ದೇಶದಿಂದ ಕಿರುಕುಳ ನೀಡಿರುವ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಕಂಪೆನಿಯೊಂದರ ಪ್ರಾಡಕ್ಟ್ ಸೇಲ್‌ ಕೆಲಸ ಮಾಡಿಕೊಂಡಿರುವ 19 ವರ್ಷದ ಯುವತಿ ಶುಕ್ರವಾರ ಬೆಳಗ್ಗೆ 8 ಗಂಟೆಗೆ ಕಚೇರಿಗೆ ಹೋಗಿ ಪ್ರಾಡಕ್ಟ್ಗಳನ್ನು ತೆಗೆದುಕೊಂಡು ಮಾರಾಟ ಮಾಡಲು ನಾಗುರಿಯಿಂದ ಬಸ್‌ನಲ್ಲಿ ಬೆಳಗ್ಗೆ 9 ಗಂಟೆಗೆ ಸ್ಟೇಟ್‌ ಬ್ಯಾಂಕ್‌ಗೆ ಬಂದಿದ್ದರು. ಸ್ಟೇಟ್‌ ಬ್ಯಾಂಕ್‌ನಿಂದ ಬಜಪೆ ಕಡೆಗೆ ಹೋಗಲು ಖಾಸಗಿ ಬಸ್‌ನಲ್ಲಿ ಕುಳಿತಿದ್ದರು. ಆಕೆಯನ್ನು ಹಿಂಬಾಲಿಸಿಕೊಂಡು ಬಂದಿದ್ದ ಸುಮಾರು 27ರಿಂದ 28 ವರ್ಷ ವಯಸ್ಸಿನ ಯುವಕ ಆಕೆಯ ಹಿಂಬದಿಯ ಸೀಟಿನಲ್ಲಿ ಕುಳಿತು ಮಾನಭಂಗ ಮಾಡುವ ಉದ್ದೇಶದಿಂದ ಸೊಂಟಕ್ಕೆ ಕೈ ಹಾಕಿ ಎಳೆದಿದ್ದಾನೆ ಎಂದು ದೂರು ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next