Advertisement

ವಿದ್ಯುತ್ ಪ್ರವಹಿಸಿ ಯುವಕನ ಸಾವು : ಇಂಧನ ಇಲಾಖೆಯ ಮಾರ್ಗಸೂಚಿಯಂತೆ ಪರಿಹಾರ

08:18 PM Apr 27, 2022 | Team Udayavani |

ಬೆಂಗಳೂರು : ಬೆಂಗಳೂರಿನಲ್ಲಿ ವಿದ್ಯುತ್ ಪ್ರವಹಿಸಿ 22 ವರ್ಷದ ಯುವಕನ ಸಾವು ಸಂಭವಿಸಿದ್ದು, ಇಂಧನ ಇಲಾಖೆಯ ಮಾರ್ಗಸೂಚಿಯಂತೆ ಪರಿಹಾರ ನೀಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

Advertisement

ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಡೆಸಿದ ವಿಡಿಯೋ ಸಂವಾದದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ವಿದ್ಯುತ್ ಪ್ರವಹಿಸಿ ಯುವಕನ ಸಾವು ಪ್ರಕರಣಕ್ಕೆ ಬಿಬಿಎಂಪಿ ಹಾಗೂ ಬೆಸ್ಕಾಂ ಬೇಜವಾಬ್ದಾರಿತನವೇ ಕಾರಣ ಎಂದು ಆರೋಪಿಸಲಾಗುತ್ತಿದೆ ಎಂಬುದಕ್ಕೆ ಪ್ರತಿಕ್ರಯಿಸಿ, ಈ ಬಗ್ಗೆ ಸಂಪೂರ್ಣ ತನಿಖೆ ನಡೆಸಲಾಗುವುದು. ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಇಂತಹ ಪ್ರಕರಣಗಳನ್ನು ಸಹಿಸಲಾಗುವುದಿಲ್ಲ. ಈ ಅವಘಡ ಆಪ್ಟಿಕಲ್ ವೈರ್ ಅಥವಾ ವಿದ್ಯುತ್ ತಂತಿಯಿಂದ ಸಂಭವಿಸಿರುವುದೇ ಎಂಬ ಬಗ್ಗೆ ತನಿಖೆ ನಡೆಸಲು ಸೂಚನೆ ನೀಡಲಾಗಿದೆ ಎಂದರು.

ಏರ್‌ಟೆಲ್‌ ಕಂಪನಿಗೆ ಸೇರಿದ ವಿದ್ಯುತ್‌ ತಂತಿ ತಗುಲಿ ಖಾಸಗಿ ಕಂಪನಿ ನೌಕರ ಕೋಲಾರ ಮೂಲದ ಕಿಶೋರ್‌(27) ಮೃತ ಪಟ್ಟಿದ್ದ ಘಟನೆ ಸಂಜಯನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಸಂಬಂಧ ಬಿಬಿಎಂಪಿ, ಬೆಸ್ಕಾಂ ಹಾಗೂ ಏರ್‌ಟೆಲ್‌ ಕಂಪನಿ ವಿರುದ್ಧ ಸಂಜಯನಗರ ಠಾಣೆಯಲ್ಲಿ ಎಫ್ಐಆರ್‌ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next