Advertisement

ನಿಮ್ಮ ಸೂರಿಯನ್ನು ಕನಕಪುರಕ್ಕೆ ವಾಪಸ್‌ ಕಳಿಸಿದ್ದಾರೆ: ಡಿ.ಕೆ. ಸುರೇಶ್‌

12:54 AM Jun 10, 2024 | Team Udayavani |

ಕನಕಪುರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ದುಡಿದ ಕಾರ್ಯಕರ್ತರು, ಮುಖಂಡರಿಗೆ ಕೃತಜ್ಞತೆ ಸಲ್ಲಿಸಲು ರವಿವಾರ ಕರೆದಿದ್ದ ಸಭೆಯಲ್ಲಿ ಮಾಜಿ ಸಂಸದ ಡಿ.ಕೆ. ಸುರೇಶ್‌ ಭಾವುಕರಾದರು.

Advertisement

ಫ‌ಲಿತಾಂಶ ಬಳಿಕ ಎರಡನೇ ಬಾರಿ ಕ್ಷೇತ್ರಕ್ಕೆ ಭೇಟಿ ಕೊಟ್ಟಿದ್ದ ಅವರು ಸಭೆಯಲ್ಲಿ ಮಾತನಾಡಿ, ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಿದ್ದೇನೆ, ಕೂಲಿ ಕೊಟ್ಟೇ ಕೊಡುತ್ತಾರೆ, ಕನಕಪುರದ ಜನ ನನ್ನ ಕೈ ಬಿಡುವುದಿಲ್ಲ ಎಂದು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದೆ . ಆದರೆ ಕ್ಷೇತ್ರದ ಜನ ನೀನು ಕೆಲಸ ಮಾಡಿದ್ದು ಸಾಕು, ರೆಸ್ಟ್‌ ತೆಗೆದುಕೊಳ್ಳಿ ಎಂದು ನಿಮ್ಮ ಸೂರಿಯನ್ನು ಕನಕಪುರಕ್ಕೆ ವಾಪಸ್‌ ಕಳಿಸಿದ್ದಾರೆ ಎಂದರು.

ಚುನಾವಣೆಯಲ್ಲಿ ನನಗೆ ಕೂಲಿ ಕೊಡಿ ಎಂದು ಕೇಳಿದ್ದೆ . ಆದರೆ ಸರಿಯಾಗಿ ಕೆಲಸ ಮಾಡಿಲ್ಲ, ನಿಮಗಿಂತಲೂ ಉತ್ತಮರಿದ್ದಾರೆ. ಅವರಿಗೆ ಅವಕಾಶ ಮಾಡಿಕೊಡುತ್ತೇವೆ ಎಂದು ಮತದಾರರು ನನ್ನನ್ನು ತಿರಸ್ಕಾರ ಮಾಡಿದ್ದಾರೆ.
ಕ್ಷೇತ್ರ ವ್ಯಾಪ್ತಿಯ ಎಂಟು ಕ್ಷೇತ್ರದ ಮುಖಂಡರು, ಕಾರ್ಯಕರ್ತರು, ಶಾಸಕರು, ರಾಜ್ಯ ನಾಯಕರು ಎಲ್ಲರೂ ಹಗಲು ರಾತ್ರಿ ಕೆಲಸ ಮಾಡಿದರೂ ನನ್ನ ಗೆಲುವು ಸಾಧ್ಯವಾಗಲಿಲ್ಲ. ಸೋಲಿಗೆ ಯಾರನ್ನೂ ದೂಷಿಸುವುದಿಲ್ಲ, ಯಾರ ಮೇಲೂ ಬೊಟ್ಟು ಮಾಡಲ್ಲ ಎಂದರು. ನೀವು ದುಡಿದು ನನಗೆ ಶಕ್ತಿ ತುಂಬಿದ್ದೀರಿ, ಅದಕ್ಕಾಗಿ ನಿಮ್ಮ ಜತೆ ನನ್ನ ಅನಿಸಿಕೆಗಳನ್ನು ಹಂಚಿಕೊಂಡು ಧನ್ಯವಾದ ಅರ್ಪಿಸಲು ಬಂದಿದ್ದೇನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next