Advertisement

ಉಗ್ರರು ಅಪಹರಿಸಿ ಚಿತ್ರಹಿಂಸೆ ನೀಡಿದ್ದ ಯುವಕ ಆಸ್ಪತ್ರೆಯಲ್ಲಿ ಸಾವು

12:25 PM Aug 09, 2018 | Team Udayavani |

ಶ್ರೀನಗರ : ಜಮ್ಮು ಕಾಶ್ಮೀರದ ಕುಲಗಾಂವ್‌ ನಲ್ಲಿ ಉಗ್ರರಿಂದ ಅಪಹರಣಕ್ಕೆ ಗುರಿಯಾಗಿ ಚಿತ್ರಹಿಂಸೆ ನೀಡಲ್ಪಟ್ಟು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದ ಯುವಕ ಚಿಕಿತ್ಸೆ ಫ‌ಲಕಾರಿಯಾಗದೆ ಮೃತಪಟ್ಟನೆಂದು ಪೊಲೀಸರು ತಿಳಿಸಿದ್ದಾರೆ.

Advertisement

ಮೆಹರಾಜ್‌ ಅಹ್ಮದ್‌ ಮತ್ತು ಆರಿಫ್ ಮಹ್ಮದ್‌ ಎಂಬ ಇಬ್ಬರು ಯುವಕರನ್ನು ನಿನ್ನೆ ಬುಧವಾರಅಪರಿಚಿತ ಉಗ್ರರು ಅಪಹರಿಸಿದ್ದರು. ಗಂಭೀರ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಆರಿಫ್ ನ ದೇಹ ತುಂಬ ಚಿತ್ರಹಿಂಸೆ ನೀಡಿದ ಗುರುತುಗಳಿದ್ದವು. ಒಡನೆಯೇ ಆತನನ್ನು ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಇಂದು ಆತ ಕೊನೆಯುಸಿರೆಳೆದ ಎಂದು ಪೊಲೀಸರು ತಿಳಿಸಿದ್ದಾರೆ. 

ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next