Advertisement

ಆರಗ ರಾಜೀನಾಮೆಗೆ ಆಗ್ರಹಿಸಿ ನಲಪಾಡ್ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ

01:44 PM Apr 07, 2022 | Team Udayavani |

ಬೆಂಗಳೂರು : ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.

Advertisement

ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ನೇತೃತ್ವದಲ್ಲಿ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ಖಂಡನಾರ್ಹ.ಚಂದ್ರು ಕೊಲೆ ಸಂಬಂಧ ಕೋಮು ಸೌಹಾರ್ದ ಕದಡುವ ಹೇಳಿಕೆ ನೀಡಿದ್ದಾರೆಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ : ರಾಜೀನಾಮೆ ಕೊಟ್ಟು ತೀರ್ಥಹಳ್ಳಿ ಗೌರವ ಉಳಿಸಿ: ಆರಗ ಜ್ಞಾನೇಂದ್ರಗೆ ಕಿಮ್ಮನೆ ರತ್ನಾಕರ್ ಆಗ್ರಹ

ಆರಗ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ ಪ್ರತಿಭಟನಾಕಾರರು, ಬಳಿಕ ಕಾಂಗ್ರೆಸ್ ಭವನದಿಂದ ಪ್ರತಿಭಟನಾ ರ್‍ಯಾಲಿ ನಡೆಸಲು ಮುಂದಾದ ಕಾರ್ಯಕರ್ತರನ್ನು ಕಾಂಗ್ರೆಸ್ ಭವನದ ಗೇಟ್ ಬಂದ್ ಮಾಡಿ ಪೊಲೀಸರು  ತಡೆದರು. ಆಗ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು.

Advertisement

Advertisement

Udayavani is now on Telegram. Click here to join our channel and stay updated with the latest news.

Next