Advertisement

ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್‌ ಪ್ರತಿಭಟನೆ

12:25 AM Oct 13, 2019 | Lakshmi GovindaRaju |

ಬೆಂಗಳೂರು: ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಿಲ್ಲ ಎಂದು ಆರೋಪಿಸಿ ಕಾಂಗ್ರೆಸ್‌ ಯುವ ಘಟಕದ ವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಯಿತು. ಯುವ ಘಟಕದ ಅಧ್ಯಕ್ಷ ಬಸನಗೌಡ ಬಾದರ್ಲಿ ನೇತೃತ್ವದಲ್ಲಿ ನಗರದ ಕಾಂಗ್ರೆಸ್‌ ಭವನದಿಂದ ವಿಧಾನ ಸೌಧ ಮುತ್ತಿಗೆ ಹಾಕಲು ಯತ್ನಿಸಿದ್ದ ಯುವ ಘಟಕದ ಕಾರ್ಯಕರ್ತರನ್ನು ಪೊಲೀಸರು ರೇಸ್‌ ಕೋರ್ಸ್‌ ರಸ್ತೆಯಲ್ಲಿಯೇ ತಡೆದು ವಶಕ್ಕೆ ಪಡೆದರು.

Advertisement

ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನೆರೆ ಸಂತ್ರಸ್ತರ ನೆರವಿಗೆ ಬಾರದೇ ರಾಜಕೀಯ ಮಾಡುತ್ತಿವೆ. ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಸೂಕ್ತ ನೆರವು ನೀಡದೇ ಮಲತಾಯಿ ಧೋರಣೆ ತೋರುತ್ತಿದೆ ಎಂದು ಆರೋಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next