Advertisement

ಯುವ ಕಾಂಗ್ರೆಸ್‌ ಪ್ರತಿಭಟನೆ ವೇಳೆ ಕಾರ್ಯಕರ್ತೆಯ ಕಾಲಿಗೆ ಬೆಂಕಿ

02:28 PM Oct 07, 2017 | Team Udayavani |

ಬೆಂಗಳೂರು: ನಗರದ ಆನಂದ್‌ ರಾವ್‌ ಸರ್ಕಲ್‌ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಶನಿವಾರ ಯುವ ಕಾಂಗ್ರೆಸ್‌ ನಡೆಸುತ್ತಿದ್ದ ಪ್ರತಿಭಟನೆ ವೇಳೆ ಅವಘಡವೊಂದು ಸಂಭವಿಸಿದ್ದು, ಕಾರ್ಯಕರ್ತೆಯೊಬ್ಬರು ಬೆಂಕಿ ತಗುಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. 

Advertisement

ಜಿಎಸ್‌ಟಿ,ಮತ್ತು ಗ್ಯಾಸ್‌ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿ ವಿರುದ್ಧ   ಘೋಷಣೆಗಳನ್ನು ಕೂಗುತ್ತಾ ರಸ್ತೆಯಲ್ಲಿ ಬೃಹತ್‌ ಪಾತ್ರೆಗಳನ್ನಿಟ್ಟು ಕಟ್ಟಿಗೆ ಬಳಸಿ ಅಡುಗೆ ಮಾಡಲು ಮುಂದಾಗಿದ್ದರು. ಈ ವೇಳೆ ಪೆಟ್ರೋಲ್‌ ಬಳಸಲಾಗಿದ್ದು, ಭಗ್ಗನೆ ಹೊತ್ತಿಕೊಂಡ ಬೆಂಕಿ ಸಮಂತಾ ಎಂಬ ಕಾರ್ಯಕರ್ತೆಯ ಕಾಲಿಗೆ ಆವರಿಸಿಕೊಂಡಿದೆ.ಕಂಗಾಲಾದ ಆಕೆ ರಸ್ತೆಯಲ್ಲೇ ಬಿದ್ದಿದ್ದಾರೆ. 

ಕೂಡಲೆ ಸ್ಥಳದಲ್ಲಿದ್ದ ಕಾರ್ಯಕರ್ತರು ಬೆಂಕಿ ನಂದಿಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಸಮಂತಾ  ಕಾಲಿಗೆ ಗಂಭೀರ ಸ್ವರೂಪದ ಸುಟ್ಟಗಾಯವಾಗಿದೆ. 

Advertisement

Udayavani is now on Telegram. Click here to join our channel and stay updated with the latest news.

Next