Advertisement

ಬೋಟಿಗೆ ಸಿಲುಕಿದ ಬಲೆ ತೆಗೆಯುವ ಸಂದರ್ಭ ಸಮುದ್ರದಲ್ಲಿ ಮುಳುಗಿ ವ್ಯಕ್ತಿ ಸಾವು

05:34 PM Aug 11, 2020 | sudhir |

ಪಣಂಬೂರು: ನವಮಂಗಳೂರು ಬಂದರಿನಲ್ಲಿರುವ ಮಾಲಿನ್ಯ ಸ್ವಚ್ಚಗೊಳಿಸುವ ಗುತ್ತಿಗೆ ಬೋಟೊಂದರ ಪ್ರೊಫೈಲ್ಲರ್ ಗೆ ಸಿಲುಕಿದ್ದ ಬಲೆ ತೆಗೆಯಲು ಹೋದ ವ್ಯಕ್ತಿಯೊಬ್ಬ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ನವಮಂಗಳೂರು ಬಂದರಿನಲ್ಲಿ ಮಂಗಳವಾರ ನಡೆದಿದೆ.

Advertisement

ಬೈಕಂಪಾಡಿ ಸಮೀಪದ ಮೀನಕಳಿಯ ನಿವಾಸಿ ಪ್ರದೀಪ್(42) ಮೃತಪಟ್ಟವರು. ಮಂಗಳವಾರ ಮುಂಜಾನೆ ಬೋಟಿನ ಗುತ್ತಿಗೆದಾರ ಕಂಪನಿಯ ಸಿಬಂದಿ ಪ್ರದೀಪನನ್ನು ಬಲೆ ತೆಗೆಯಲು ಕರೆದುಕೊಂಡು ಹೋಗಿದ್ದರು ಎನ್ನಲಾಗಿದೆ.ಆದರೆ ನೀರಿನಲ್ಲಿ ಮುಳುಗುವಾಗ ಸಂದರ್ಭ ಸೂಕ್ತ ರಕ್ಷಣಾ ವ್ಯವಸ್ಥೆ ನೀಡದೆ ಈ ಘಟನೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದು ಐಪಿಸಿ ಸೆಕ್ಷನ್ ಎ304ರ ಪ್ರಕಾರ ಗುತ್ತಿಗೆದಾರ ಕಂಪನಿ ಮತ್ತಿತರರ ಮೇಲೆ ಪಣಂಬೂರು ಠಾಣೆಯಲ್ಲಿ ಕೇಸು ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next