Advertisement

ರಾಯಚೂರು : ಕರೆಯಲ್ಲಿ ಈಜಲು ಹೋದವ ಬಾಲಕ ನೀರುಪಾಲು‌

03:30 PM Aug 29, 2020 | sudhir |

ರಾಯಚೂರು: ಮಸ್ಕಿ ತಾಲೂಕಿನ ಗುಡಲದಿನ್ನಿ ಗ್ರಾಮದ ಹೊರವಲಯದಲ್ಲಿರುವ ಕರೆಯಲ್ಲಿ ಈಜಲು ಹೋಗಿದ್ದ ಬಾಲಕ ನೀರು ಪಾಲಾದ ಘಟನೆ ನಡೆದಿದೆ. ದೇಸಾಯಿ ಬೋಗಾಪುರದ ಕೇಶಪ್ಪ(೧೬) ಮೃತ ಬಾಲಕ ಎಂದು ಗುರುತಿಸಲಾಗಿದೆ.

Advertisement

ಬೆಳಗ್ಗೆ ಹೊಲಕ್ಕೆ ತೆರಳಿದ್ದಾಗ ಸಂದರ್ಭ ಜಮೀನಿನ ಬಳಿಯ ಕೆರೆಗೆ ಈಜಲು ಹೋಗಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿಗಳ ಸಹಾಯದಿಂದ ಮೃತ ದೇಹ ಹೊರತೆಗೆಯಲಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತ ದೇಹವನ್ನ ಸಿಂಧನೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನಾ ಸ್ಥಳಕ್ಕೆ ತುರುವಿಹಾಳ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಪೋಷಕರ ದೂರಿನ ಆಧಾರ ಮೇಲೆ ತನಿಖೆ ನಡೆಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next