Advertisement

ಕಡಬ: ಸ್ನೇಹಿತರೊಂದಿಗೆ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು

05:41 PM Apr 03, 2022 | Team Udayavani |

ಕಡಬ: ನೀರಿನಲ್ಲಿ ಮುಳುಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಕಡಬ ಸಮೀಪದ ಪಿಜಕ್ಕಳ ಎಂಬಲ್ಲಿ ಭಾನುವಾರ ಅಪರಾಹ್ನ ಸಂಭವಿಸಿದೆ.

Advertisement

ನರಿಮೊಗರು ಐಟಿಐ ನ ವಿದ್ಯಾರ್ಥಿ, ಕಡಬ ಹೈಸ್ಕೂಲ್ ಬಳಿಯ ಮಜ್ಜಗುಡ್ಡೆ ನಿವಾಸಿ ನಾವುರ ಅವರ ಪುತ್ರ ನಿತೇಶ್  (18) ಮೃತ ವಿದ್ಯಾರ್ಥಿ.  ಈತ ತನ್ನ ಸ್ನೇಹಿತರೊಂದಿಗೆ ನದಿಯಲ್ಲಿ ಸ್ನಾನ ಮಾಡಲು ನೀರಿಗಿಳಿದಿದ್ದ ವೇಳೆ ಮುಳುಗಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಇದನ್ನೂ ಓದಿ:ರಾಯಚೂರು: ಸ್ನೇಹಿತರೊಂದಿಗೆ ಈಜಲು ಹೋದ ಇಬ್ಬರು ನೀರುಪಾಲು; ಹಬ್ಬದಂದೇ ನಡೆಯಿತು ದುರಂತ

ಸುದ್ದಿ ತಿಳಿದ ಕಡಬ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳೀಯ ಈಜುಗಾರರಾದ ದಯಾನಂದ ಪೊಯ್ಯೇತಡ್ಡ   ಹಾಗೂ ಮುರಳಿ  ಮೂರಾಜೆ ಅವರು ಪೊಲೀಸರ ಸಮಕ್ಷಮದಲ್ಲಿ ಮೃತ ದೇಹವನ್ನು ನದಿಯಿಂದ ಮೇಲೆತ್ತಿದ್ದಾರೆ.

ಮೃತ ಯುವಕ ತಂದೆ, ತಾಯಿ ಹಾಗೂ ಸಹೋದರನನ್ನು ಅಗಲಿದ್ದಾನೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next