Advertisement

ಗಜೇಂದ್ರಗಡ: ಸ್ನೇಹಿತರೊಂದಿಗೆ ಈಜಲು ಹೋಗಿದ್ದ ಯುವಕ ನೀರು ಪಾಲು

07:49 PM Mar 19, 2022 | Team Udayavani |

ಗಜೇಂದ್ರಗಡ(ಗದಗ): ತಾಲೂಕಿನ ಜಿಗೇರಿ ಕೆರೆಯಲ್ಲಿ ಈಜಲು ಹೋಗಿದ್ದ ಯುವಕನೊಬ್ಬ ನೀರು ಪಾಲಾದ ಘಟನೆ ಶನಿವಾರ ನಡೆದಿದೆ.

Advertisement

ಗಜೇಂದ್ರಗಡ ಪಟ್ಟಣದ ನಿವಾಸಿ ಶಂಕರ ಬೆರಗಿ(25) ಮೃತ ದುರ್ದೈವಿ ಎಂದು ತಿಳಿದು ಬಂದಿದೆ.

ಶಂಕರ ತನ್ನ ಸ್ನೇಹಿತರೊಂದಿಗೆ ಜಿಗೇರಿ ಕೆರೆಗೆ ಈಜಲು ತೆರಳಿದ್ದ. ಮೇಲಿಂದ ಕೆರೆಗೆ ಹಾರಿದ ವೇಳೆ ಕೆರೆಯ ಹುದುಲಿಗೆ ಸಿಲುಕಿ ಮೃತಪಟ್ಟಿದ್ದಾನೆ. ಇದನ್ನು ಕಂಡ ಸ್ನೇಹಿತ ಹಾಗೂ ಮತ್ತಿತರರು ತಕ್ಷಣವೇ ನೀರಿಗೆ ಹಾರಿ ಸ್ನೇಹಿತನ ರಕ್ಷಿಸಲು ಪ್ರಯತ್ನಿಸಿದರೂ, ಅದಾಗಲೇ ಶಂಕರ್ ಬೆರಗಿ ಕೊನೆಯುಸಿರೆಳೆದಿದ್ದರು ಎಂದು ತಿಳಿದು ಬಂದಿದೆ.

ಈ ಕುರಿತು ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next