Advertisement

ಆಕಸ್ಮಿಕವಾಗಿ ಕೆರೆಗೆ ಬಿದ್ದು ಯುವಕ ಮೃತ್ಯು

02:59 PM Dec 31, 2021 | Team Udayavani |

ಸವಣೂರು: ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ತೋಟವೊಂದರಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಕೆರೆಗೆ ಜಾರಿ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.

Advertisement

ಕೊಳ್ತಿಗೆ ಗ್ರಾಮದ ಕೆಮ್ಮಾರ ಎಂಬಲ್ಲಿ ಮುರಳೀಧರ ಎಸ್.ಪಿ. ಅವರ ತೋಟದಲ್ಲಿ ಕೆಲಸ ಮಾಡುತ್ತಿದ್ದ ಅಮ್ಚಿನಡ್ಕ ನಿವಾಸಿ ಅವಿನಾಶ್ (24) ಎಂಬವರೇ ಮೃತ ದುರ್ದೈವಿ.

ಪುತ್ತೂರು ಅಗ್ನಿಶಾಮಕ ದಳದ ಸಿಬಂದಿ ಮೃತ ದೇಹವನ್ನು ಕೆರೆಯಿಂದ ಮೇಲೆಕ್ಕೆತ್ತಿದ್ದು, ಬೆಳ್ಳಾರೆ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next