Advertisement

ಪ್ರವಾಸಿ ತಾಣ ತೊಣ್ಣೂರು ಕೆರೆಯಲ್ಲಿ ಮುಳುಗಿ ಯುವಕ ಸಾವು

08:06 PM Jan 31, 2021 | Team Udayavani |

ಮಂಡ್ಯ: ಪಾಂಡವಪುರ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ತೊಣ್ಣೂರು ಕೆರೆಯಲ್ಲಿ ಈಜಲು ಹೋಗಿದ್ದ ಯುವಕನೊಬ್ಬ ಮೃತಪಟ್ಟಿರುವ ಘಟನೆ ಭಾನುವಾರ ಸಂಜೆ 4ರ ಸಮಯದಲ್ಲಿ ನಡೆದಿದೆ.

Advertisement

ಮೈಸೂರಿನ ನಿವಾಸಿ ಮಹಮದ್ ಜಾಕೀರ್ ಹುಸೇನ್ ಪುತ್ರ ಮಹಮದ್ ಸನ್ಜೀಮ್(19) ಮೃತ ಯುವಕ. ಈತ ತನ್ನ ನಾಲ್ಕು ಜನ ಸ್ನೇಹಿತರೊಂದಿಗೆ ಪ್ರವಾಸಿ ತಾಣ ಕೆರೆತೊಣ್ಣೂರು ಗ್ರಾಮದ ಕೆರೆಗೆ ಬಂದಿದ್ದಾನೆ. ಈ ಸಂದರ್ಭದಲ್ಲಿ ಕೆರೆಯಲ್ಲಿ ಈಜಲು ಹೋಗಿದ್ದು, ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ಆಗಮಿಸಿ ಮೃತ ದೇಹಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ. ಆದರೆ ಇದುವರೆಗೂ ಮೃತದೇಹ ಪತ್ತೆಯಾಗಿಲ್ಲ. ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next