Advertisement

ಹಾಸನ: ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ

04:44 PM Jul 30, 2021 | Team Udayavani |

ಹಾಸನ: ಜೀವನದಲ್ಲಿ ಜಿಗುಪ್ಸೆ ಹೊಂದಿ ಯುವಕನೊಬ್ಬ ರೈಲಿಗೆ ತಲೆಕೊಟ್ಟುಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಶುಕ್ರವಾರ ನಡೆದಿದೆ.

Advertisement

ಹಾಸನದ ಜ್ಞಾನಾಕ್ಷಿ ಕಲ್ಯಾಣ ಮಂಟಪದ ಹಿಂಭಾಗದ ರೈಲ್ವೆ ಟ್ರ್ಯಾಕ್ ನಲ್ಲಿ ಈ ಪ್ರಕರಣ ನಡೆದಿದ್ದು, ಆತ್ಮಹತ್ಯೆಗೆ ಶರಣಾದ ಯುವಕನನ್ನು ಪ್ರಮೋದ್ (23 ವ) ಎಂದು ಗುರುತಿಸಲಾಗಿದೆ. ಆತ ಗದಗ ಜಿಲ್ಲೆಯ ರೋಣ ತಾಲೂಕಿನ ಕುರಹಟ್ಟಿ ಗ್ರಾಮದವನೆಂದು ತಿಳಿದು ಬಂದಿದೆ.

ಪ್ರಮೋದ್ ಬೆಂಗಳೂರಿನ ಕಿರ್ಲೋಸ್ಕರ್ ಕಂಪನಿಯಲ್ಲಿ ನೌಕರನಾಗಿದ್ದ ಎನ್ನಲಾಗಿದೆ. ಕೋವಿಡ್ 19 ಹಿನ್ನೆಲೆಯಲ್ಲಿ ಆತ ಸ್ವಗ್ರಾಮದಲ್ಲಿ ಉಳಿದುಕೊಂಡಿದ್ದ ಎರಡು ದಿನಗಳ ಹಿಂದೆ ಕೆಲಸಕ್ಕೆ ಬೆಂಗಳೂರಿಗೆ ಹೋಗುವುದಾಗಿ ಕುಟುಂಬಸ್ಥರಿಗೆ ಹೇಳಿಬಂದಿದ್ದ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ:ಚಾರ್ಜರ್ ವೈಯರ್ ನಿಂದ ಕುತ್ತಿಗೆಗೆ ಬಿಗಿದು ಪತ್ನಿಯನ್ನು ಭೀಭತ್ಸವಾಗಿ ಕೊಂದ ಪತಿ..!

ಶುಕ್ರವಾರ ಮಧ್ಯಾಹ್ನ ಬೆಂಗಳೂರು-ಮಂಗಳೂರು ರೈಲಿಗೆ ತಲೆಯೊಡ್ಡಿದ್ದ ಪ್ರಮೋದ್ ನ ರುಂಡ-ಮುಂಡ ಬೇರ್ಪಟ್ಟಿದೆ. ರೈಲ್ವೇ ಪೊಲೀಸರು ಮೃತದೇಹವನ್ನು ಹಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next