Advertisement

ಸ್ನೇಹಿತರ ಜೊತೆ ಈಜಲು ಹೋದ ಯುವಕ ನೀರಿನ ಸುಳಿಗೆ ಸಿಲುಕಿ ಸಾವು

05:36 PM Oct 07, 2020 | sudhir |

ಮಂಡ್ಯ: ಈಜಲು ಹೋಗಿದ್ದ ಯುವಕನೊಬ್ಬ ನೀರಿನ ಸುಳಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಗಾಣಾಳು ಫಾಲ್ಸ್ ನಲ್ಲಿ ಬುಧವಾರ ಸಂಭವಿಸಿದೆ.

Advertisement

ಬೆಂಗಳೂರು ಮೂಲದ ಸಂಜಯ್(22) ಮೃತಪಟ್ಟ ಯುವಕನಾಗಿದ್ದಾನೆ. ನಾಲ್ಕು ಜನ ಸ್ನೇಹಿತರೊಂದಿಗೆ ಎರಡು ಬೈಕ್‌ನಲ್ಲಿ ಹಲಗೂರು ಸಮೀಪದ ಗಾಣಾಳು ಫಾಲ್ಸ್ ನೋಡಲು ಬಂದಿದ್ದರು. ಈ ಸಂದರ್ಭದಲ್ಲಿ ಸಂಜಯ್ ಈಜಲು ನೀರಿಗೆ ಇಳಿದಿದ್ದಾನೆ. ಆಗ ನೀರಿನ ಸುಳಿಗೆ ಸಿಲುಕಿ ಮೇಲೆ ಬರಲಾಗದೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಹಲಗೂರು ಪೊಲೀಸರು ಭೇಟಿ ನೀಡಿ ಶವವನ್ನು ಮೇಲಕ್ಕೆತ್ತಿ ಸರ್ಕಾರಿ ಆಸ್ಪತ್ರೆಯಲ್ಲಿ ಪಂಚನಾಮೆ ನಡೆಸಿದ ಬಳಿಕ ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ. ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಳ: ಲಾಕ್‌ಡೌನ್‌ ಸಮಯದಲ್ಲಿ ಪ್ರಕರಣಗಳಲ್ಲಿ ಏರಿಕೆ !

Advertisement

Udayavani is now on Telegram. Click here to join our channel and stay updated with the latest news.

Next