Advertisement

ಬಂಟ್ವಾಳ: ತಾಯಿಯ ಕುರಿತು ಭಾವನಾತ್ಮಕ ಸ್ಟೇಟಸ್ ಹಾಕಿ ಯುವಕ ಆತ್ಮಹತ್ಯೆ!

11:02 AM Feb 09, 2021 | Team Udayavani |

ಬಂಟ್ವಾಳ: ಅನಾರೋಗ್ಯದಲ್ಲಿ ತಾಯಿಯನ್ನು ಉಳಿಸಲು ಸಾಧ್ಯವಾಗಿಲ್ಲ, ತಾಯಿಗಿಂತ ಮೊದಲು ತಾನೇ ಹೋಗುತ್ತೇನೆ ಎಂದು ಮೊಬೈಲ್ ನಲ್ಲಿ ಸ್ಟೇಟಸ್ ಹಾಕಿ ಯುವಕನೋರ್ವ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ರಾತ್ರಿ ದಕ್ಷಿಣ ಕನ್ನಡ ನಡೆದಿದೆ.

Advertisement

ಅನಂತಾಡಿ ಪಂತಡ್ಕ ನಿವಾಸಿ ನೀರಜ್ (30) ಆತ್ಮಹತ್ಯೆ ಮಾಡಿಕೊಂಡ ಯುವಕ. ಯುವಕನ ತಾಯಿ ದೇರಳಕಟ್ಟೆ ಆಸ್ಪತ್ರೆಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದು, ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ:ಕೋವಿಡ್ ಲಸಿಕೆ ಹಾಕಿಸಿಕೊಂಡ ನಂತರ ಮದ್ಯಪಾನ ಮಾಡಬಾರದು ಎಂದೇನಿಲ್ಲ: ಬಿಬಿಎಂಪಿ ಆಯುಕ್ತ

ಪಾಣೆಮಂಗಳೂರು ಸೇತುವೆಯಿಂದ ಯುವಕ ರಾತ್ರಿ ನದಿಗೆ ಹಾರಿದ್ದು, ಸೋಮವಾರ ರಾತ್ರಿ ಹುಡುಕಾಡಿದರೂ, ಯುವಕನ ಸುಳಿವು ಪತ್ತೆಯಾಗಿರಲಿಲ್ಲ. ಮಂಗಳವಾರ ಬೆಳಗ್ಗೆ ಮೃತದೇಹ ಪತ್ತೆಯಾಗಿದೆ.

Advertisement

ಸ್ಥಳೀಯ ಈಜುಗಾರ ಮೊಹಮ್ಮದ್ ನಂದಾವರ ಹಾಗೂ ತಂಡ, ಬಂಟ್ವಾಳ ಅಗ್ನಿಶಾಮಕ ದಳದ ತಂಡ ಹುಡುಕಾಟ ನಡೆಸಿದೆ. ಬಂಟ್ವಾಳ ನಗರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ನಮ್ಮನ್ನು ಬದುಕಿಸಿದ್ದೇ ಆ ಫೋನ್‌ ಕರೆ : ಪ್ರವಾಹದಲ್ಲಿ ಬದುಕುಳಿದವರ ಕಥೆ

Advertisement

Udayavani is now on Telegram. Click here to join our channel and stay updated with the latest news.

Next