Advertisement

ಪಿರಿಯಾಪಟ್ಟಣದ ಯುವಕನ ಮೆದುಳು ನಿಷ್ಕ್ರಿಯ; ಅಂಗಾಂಗ ದಾನದ ಮೂಲಕ ಸಾರ್ಥಕತೆ

07:00 PM Sep 30, 2022 | Team Udayavani |

ಪಿರಿಯಾಪಟ್ಟಣ:ಮೆದುಳು ನಿಷ್ಕ್ರಿಯಗೊಂಡ ಯುವಕನೊಬ್ಬ ಅಂಗಾಂಗ ದಾನ ಮಾಡುವ ಮೂಲಕ ಹನ್ನೆರಡು ಮಂದಿಗೆ ನೆರವಾಗುವ ಮೂಲಕ ಸಾರ್ಥಕತೆ ಮೆರೆದಿದ್ದಾರೆ.

Advertisement

ತಾಲೂಕಿನ ಚಿಟ್ಟೇನಹಳ್ಳಿ ಗ್ರಾಮದ ನಿವಾಸಿ ಸುಮತಿ ಎಂಬುವವರ ಪುತ್ರ ಆರ್.ಕೆ ಲೋಹಿತ್ (29) ಅವರು ಸೆ.26ಕ್ಕೆ ಅಪಘಾತ ಸಂಭವಿಸಿ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಪಡದು ನಂತರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಆದರೆ ಸೆ.30 ರಂದು ವೈದ್ಯರು ಮೆದುಳು ನಿಷ್ಕ್ರಿಯಗೊಂಡಿರುವುದಾಗಿ ಘೋಷಿಸಿ, ಅಂಗಾಂಗ ದಾನದ ಬಗ್ಗೆ ಕುಟುಂಬದವರಿಗೆ ತಿಳಿಸಿದ್ದು, ಚಿಕಿತ್ಸೆ ಫಲಕಾರಿಯಾದ ಹಿನ್ನೆಲೆಯಲ್ಲಿ ಸಾವನ್ನಪ್ಪುವ ಮೊದಲು ಕುಟುಂಬ ವರ್ಗದವರು ಅಂಗಾಂಗ ದಾನ ಮಾಡಲು ತೀರ್ಮಾನಿಸಿ 12 ಜನರ ಬದುಕಿಗೆ ಆಶಾಕಿರಣವಾಗಿ ಸಾರ್ಥಕತೆ ಮೆರೆದಿದ್ದಾರೆ.

ಇದನ್ನೂ ಓದಿ : ಕೋವಿಡ್ ನಂತರ ಬಲಿಷ್ಠ ಭಾರತ ನಿರ್ಮಾಣವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಕೆ.ಆರ್.ಲೋಹೀತ್ ಅವರ ಯಕೃತ್ತು, ಮೂತ್ರಪಿಂಡಗಳು, ಹೃದಯ ಕವಾಟ, ಚರ್ಮ ಮತ್ತು ಕಾರ್ನಿಯಾ ಸೇರಿದಂತೆ ಇನ್ನಿತರ ಅಂಗಾಂಗಗಳನ್ನು ದಾನವಾಗಿ ಪಡೆದ ವೈದ್ಯರು, ಚಿಕಿತ್ಸಾಲಯಕ್ಕೆ ನೀಡಿ ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗಳಿಗೆ ಕಸಿ ಮಾಡುವುದಾಗಿ ತಿಳಿಸಿದ್ದಾರೆ ಎಂದು ಸುಮತಿಯವರ ತಂಗಿ ಪಿರಿಯಾಪಟ್ಟಣ ತಾಲೂಕು ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಅಧ್ಯಕ್ಷೆ ಗಾಯತ್ರಿಯವರು ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next