Advertisement

Attempting to Kidnap: ಕೇಂದ್ರ ಸಚಿವೆ ಸಾಧ್ವಿ ಅಪಹರಣಕ್ಕೆ ಯತ್ನ…ಯುವಕನ ಬಂಧನ!

10:36 AM Jan 18, 2024 | Nagendra Trasi |

ಲಕ್ನೋ(ಉತ್ತರಪ್ರದೇಶ): ಕೇಂದ್ರ ಖಾತೆಯ ರಾಜ್ಯ ಸಚಿವೆ ಸಾಧ್ವಿ ನಿರಂಜನ್‌ ಜ್ಯೋತಿ ಅವರನ್ನು ಅಪಹರಿಸಲು ಯತ್ನಿಸಿ ವಿಫಲನಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನನ್ನು ಬಂಧಿಸಿರುವ ಘಟನೆ ಲಕ್ನೋದಲ್ಲಿ ನಡೆದಿದೆ.

Advertisement

ಇದನ್ನೂ ಓದಿ:IndiGo fined: ರನ್‌ವೇಯಲ್ಲೇ ಪ್ರಯಾಣಿಕರಿಂದ ಆಹಾರ ಸೇವನೆ, ಇಂಡಿಗೋಗೆ ಬಿತ್ತು 1.2 ಕೋಟಿ ದಂಡ

ಸಚಿವೆ ಸಾಧ್ವಿ ಕಾರು ಚಾಲಕ ನೀಡಿದ ದೂರಿನ ಪ್ರಕಾರ, ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಸಚಿವರನ್ನು ಕರೆ ತರುವ ನಿಟ್ಟಿನಲ್ಲಿ ಕಾರಿನಲ್ಲಿ ತೆರಳುತ್ತಿದ್ದಾಗ ಬಂತಾರಾ ಪೊಲೀಸ್‌ ಠಾಣಾ ವ್ಯಾಪ್ತಿಯ ನ್ಯೂ ಪ್ರಧಾನ್‌ ಧಾಬಾ ಬಳಿ ಟೀ ಕುಡಿಯಲು ನಿಲ್ಲಿಸಿದ್ದ ವೇಳೆ ವ್ಯಕ್ತಿಯೊಬ್ಬ ದಿಢೀರನೆ ಬಂದು ಗನ್‌ ತೋರಿಸಿ ಕಾರಿನೊಳಗೆ ಕುಳಿತು, ಚಾಲಕನನ್ನು ಕೆಳಗಿಳಿಸಿದ್ದ.

ಬಳಿಕ ಕಾರಿನ ಸಹಿತ ಪರಾರಿಯಾಗಲು ಯತ್ನಿಸಿದ್ದ ಈ ಸಂದರ್ಭದಲ್ಲಿ ಭದ್ರತಾ ಸಿಬಂದಿಗಳು ಕಾರನ್ನು ಸುತ್ತುವರಿದು, ಯುವಕನನ್ನು ಬಂಧಿಸಿ ಪೊಲೀಸರಿಗೆ ಒಪ್ಪಿಸಿರುವುದಾಗಿ ವರದಿ ವಿವರಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಯುವಕನ ವಿರುದ್ಧ ಸಚಿವೆ ಸಾಧ್ವಿಯನ್ನು ಅಪಹರಿಸಲು ಯತ್ನಿಸಿರುವುದಾಗಿ ಆರೋಪಿಸಿ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿರುವುದಾಗಿ ಐಎಎನ್‌ ಎಸ್‌ ವರದಿ ಮಾಡಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next