Advertisement

Mumbai ಅಪಘಾತ ಗಾಯಾಳು ಯುವಕ ಸಾವು

12:39 AM Mar 21, 2024 | Team Udayavani |

ಕೋಟ: ಮುಂಬಯಿಯಲ್ಲಿ ನಡೆದ ಅಪಘಾತವೊಂದರಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕೋಟ ಸಮೀಪ ಅಚ್ಲಾಡಿ ಮಕ್ಕಿಮನೆ ನಿವಾಸಿ ಎಂಜಿನಿಯರಿಂಗ್‌ ವಿದ್ಯಾರ್ಥಿ ಅನ್ವಿಶ್‌ (19) ಚಿಕಿತ್ಸೆ ಫಲಿಸದೆ ಮುಂಬಯಿಯ ಆಸ್ಪತ್ರೆಯಲ್ಲಿ ಮಂಗಳವಾರ ಮೃತಪಟ್ಟಿದ್ದಾರೆ.

Advertisement

ಈತ ಕಾವಡಿ ವರದರಾಜ್‌ ಶೆಟ್ಟಿ ಮತ್ತು ಅಚ್ಲಾಡಿಯ ಲತಾ ಶೆಟ್ಟಿ ಅವರ ಪುತ್ರನಾಗಿದ್ದು ತಂದೆ ರೈಲ್ವೆ ಉದ್ಯೋಗಿಯಾಗಿದ್ದರು.

ಅನ್ವಿಶ್‌ ಮುಂಬಯಿಯಲ್ಲಿ ಪ್ರಥಮ ವರ್ಷದ ಎಂಜಿನಿಯರಿಂಗ್‌ ವಿದ್ಯಾರ್ಥಿಯಾಗಿದ್ದು 15 ದಿನದ ಹಿಂದೆ ಸಂಬಂಧಿಕರ ಮನೆಯಿಂದ ರಾತ್ರಿ ಬೈಕ್‌ನಲ್ಲಿ ಮರಳುತ್ತಿದ್ದಾಗ ಸ್ಕಿಡ್‌ ಆಗಿ ಅಪಘಾತ ಸಂಭವಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next