Advertisement

ತನ್ನ ಅಂಗಡಿ ಮುಂದೆ ಉಗುಳಿದ ಎಂಬ ಕ್ಷುಲ್ಲಕ ಕಾರಣಕ್ಕೆ ಇರಿದು ವ್ಯಕ್ತಿಯ ಕೊಲೆ

02:16 PM Sep 23, 2020 | sudhir |

ಚಿಂತಾಮಣಿ : ಅಂಗಡಿ ಮುಂದೆ ಎಂಜಲು ಉಗಿದಿದ್ದಕ್ಕೆ ಅಂಗಡಿ ಮಾಲಿಕನ ಮಗ ವ್ಯಕ್ತಿಯೊಬ್ಬನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಚಿಂತಾಮಣಿ ತಾಲೂಕಿನ ಉಲ್ಲಪ್ಪನಹಳ್ಳಿ ಗ್ರಾಮದಲ್ಲಿ ನಡೆದಿದೆ.

Advertisement

ಕೊಲೆಗೀಡಾದ ವ್ಯಕ್ತಿಯನ್ನು ಮುನಿಕೃಷ್ಣ ಎಂದು ಗುರುತಿಸಲಾಗಿದ್ದು ಚೇತನ್ ಎಂಬ ಯುವಕ ಕೊಲೆ ಮಾಡಿದ್ದಾನೆ.

ಕಾಫಿ ಮಾಡಲು ಕಾಫಿ ಪುಡಿ ತರಲು ಅಂಗಡಿಗೆ ಹೊಗಿದ್ದ ವೇಳೆ ಅಂಗಡಿ ಬಳಿ ಮುನಿಕೃಷ್ಣ ಎಂಜಲು ಉಗಿದಿದ್ದಾನೆ ಇದರಿಂದ ಕುಪಿತಗೊಂಡ ಚೇತನ್ ಅಂಗಡಿ‌ ಮುಂದೆ ಎಂಜಲು ಉಗಿಯಬೇಡ ಎಂದು ಬುದ್ದಿವಾದ ಹೇಳಿದ್ದಾನೆ ಎನ್ನಲಾಗಿದೆ ಈ ವೇಳೆಯಲ್ಲಿ ಇಬ್ಬರ ಮದ್ಯೆ ಮಾತಿನ‌ ಚಕಮಕಿ‌ ನಡೆದು ಕೈ ಕೈ ಮಿಲಾಯಿಸಿದ್ದಾರೆ.

ಈ ವೇಳೆ‌ ಉದ್ರೇಕಗೊಂಡ ಚೇತನ್ ಚಾಕುವಿನಿಂದ ಮುನಿಕೃಷ್ಣನ ಎದೆ ಮತ್ತು ಹೊಟ್ಟೆ ಭಾಗಕ್ಕೆ ಎರಡು ಮೂರು ಬಾರಿ ತಿವಿದಿದ್ದಾನೆ ಪರಿಣಾಮ ಮುನಿಕೃಷ್ಣನ ಸ್ಥಿತಿ ಗಂಭಿರವಾಗಿದೆ ಸ್ಥಳದಲ್ಲಿದ್ದ ಗ್ರಾಮಸ್ಥರು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ಸೇರಿಸಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರ‌ಕ್ಕೆ ತೆರಳುತ್ತಿದ್ದ ವೇಳೆ ಮಾರ್ಗಮಧ್ಯೆ ಮುನಿಕೃಷ್ಣ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.

ಇದನ್ನೂ ಓದಿ : ತಡರಾತ್ರಿ ದಟ್ಟ ಕಾಡಿನಲ್ಲಿ ಕಾರಿನೊಳಗೆ 6 ತಾಸು ಕಳೆದ ಮೂವರನ್ನು ರಕ್ಷಿಸಿದ ಪೊಲೀಸ್‍ ಅಧಿಕಾರಿ

Advertisement

ವಿಷಯ ತಿಳಿದ ಚಿಂತಾಮಣಿ ಗ್ರಾಮಾಂತರ ಪೋಲೀಸರು ಘಟನಾ ಸ್ಥಳಕ್ಕೆ ಭೇಟಿ ಪ್ರಕರಣ ದಾಖಲಿಸಿಕೊಂಡು ಮುಂದಿನ‌ ಕ್ರಮ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next