Advertisement

Chamarajanagar: ರೈಲಿನಿಂದ ಬಿದ್ದು ಯುವಕ ಮೃತ್ಯು

10:16 AM Feb 01, 2024 | Team Udayavani |

ಚಾಮರಾಜನಗರ: ರೈಲಿನಿಂದ ಬಿದ್ದು ಯುವಕನೊಬ್ಬ ಮೃತಪಟ್ಟ ಘಟನೆ ತಾಲೂಕಿನ ಬದನಗುಪ್ಪೆ ಬಳಿ ನಡೆದಿದೆ.

Advertisement

ಚಾಮರಾಜನಗರದ ಉಪ್ಪಾರ ಬಡಾವಣೆಯ ನಿವಾಸಿ ಕುಮಾರ್ (25) ಮೃತ ಯುವಕ.

ಮೈಸೂರಿನಿಂದ ಚಾಮರಾಜನಗರಕ್ಕೆ ಬರುತ್ತಿದ್ದ ರೈಲು ಬದನಗುಪ್ಪೆ ಬಳಿ ಬರುತ್ತಿದ್ದಾಗ ರೈಲಿನಿಂದ ಬಿದ್ದು ಯುವಕ ಸಾವನ್ನಪ್ಪಿದ್ದಾನೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಚಾಮರಾಜನಗರ ವೈದ್ಯಕೀಯ ಆಸ್ಪತ್ರೆಯಲ್ಲಿ ಇಡಲಾಗಿದೆ.

ಮೈಸೂರಿನ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next