Advertisement

ಯುವತಿ ವಿವಾಹ ನಿರಾಕರಿಸಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಯುವಕ

10:18 AM Jul 25, 2023 | Team Udayavani |

ಬೆಂಗಳೂರು: ಪ್ರೇಮ ವೈಫ‌ಲ್ಯಕ್ಕೆ ಬೇಸತ್ತು ಯುವಕನೊಬ್ಬ ಡೆತ್‌ನೋಟ್‌ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾಲಕ್ಷ್ಮೀ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಚಾಮರಾಜನಗರ ಜಿಲ್ಲೆ  ಕೊಳ್ಳೇಗಾಲ ಮೂಲದ ನವೀನ್‌ (27) ಆತ್ಮಹತ್ಯೆ ಮಾಡಿಕೊಂಡವರು.

ಕೆಲ ವರ್ಷಗಳ ಹಿಂದೆಯೇ ಬೆಂಗಳೂರಿಗೆ ಬಂದಿರುವ ನವೀನ್‌, ಠಾಣೆ ವ್ಯಾಪ್ತಿಯಲ್ಲಿ ಬಾಳೆಕಾಯಿ ಮಂಡಿ ನಡೆಸುತ್ತಿದ್ದು, ಜೆ.ಎಸ್‌.ನಗರದಲ್ಲಿ ಪೋಷಕರ ಜತೆ ವಾಸವಾಗಿದ್ದ. ಈ ನಡುವೆ ಯುವತಿಯೊಬ್ಬಳ ಪರಿಚಯವಾಗಿ, ಆಕೆಯನ್ನು ಪ್ರೀತಿಸುತ್ತಿದ್ದ. ಮದುವೆ ವಿಚಾರ ಪ್ರಸ್ತಾಪಿಸಿದಾಗ ಆಕೆ ನಿರಾಕರಿಸಿದ್ದಾಳೆ ಎಂದು ಹೇಳಲಾಗಿದೆ. ಪ್ರೇಮ ವೈಫ‌ಲ್ಯದ ಬಗ್ಗೆ ಮರಣ ಪತ್ರವನ್ನು ಬರೆದಿಟ್ಟು, ಆಕೆ ಹೆಸರನ್ನೂ ಅದರಲ್ಲಿ ಉಲ್ಲೇಖೀಸಿದ್ದಾನೆ. ‘ನಿನ್ನನ್ನು ಪ್ರೀತಿಯಿಂದ ನೋಡಿಕೊಳ್ಳುತ್ತೇನೆ ಎಂದು ಹೇಳಿದರೂ ಆಕೆ ನನ್ನ ಪ್ರೀತಿ ನಿರಾಕರಿಸಿದಳು, ಆಕೆ ಇಲ್ಲದೆ ನಾನು ಬದುಕಿರಲಾರೆ’ ಎಂದು ಆತ ಪತ್ರದಲ್ಲಿ ಉಲ್ಲೇಖೀಸಿ ಯಾರೂ ಇಲ್ಲದ ವೇಳೆ ಸೀರೆಯಿಂದ ಫ್ಯಾನ್‌ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದರು.

ಮಹಾಲಕ್ಷ್ಮೀ ಲೇಔಟ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next