Advertisement

ಪುತ್ತೂರು: ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಬಸ್‌ಗೆ ಗುದ್ದಿದ ಬೈಕ್‌; ಸವಾರ ಸ್ಥಳದಲ್ಲೇ ಸಾವು

12:50 PM Sep 04, 2022 | Team Udayavani |

ಪುತ್ತೂರು: ಬೈಕೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಬಸ್‌ಗೆ ಗುದ್ದಿದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶನಿವಾರ( ಸೆ.3 ರಂದು) ರಾತ್ರಿ ಪರ್ಲಡ್ಕ ರಸ್ತೆಯಲ್ಲಿ ನಡೆದಿದೆ.

Advertisement

ವೀರಮಂಗಲ ಖಂಡಿಗ ಚಂದ್ರಶೇಖರ್ ಗೌಡ ಅವರ ಪುತ್ರ  ಭರತ್ ರಾಜ್ ಗೌಡ (22) ಮೃತ ಯುವಕ. ಕೊಳ್ತಿಗೆ ಪೆರ್ಲಂಪಾಡಿ ನಿವಾಸಿ  ಧನುಷ್(24) ಗಾಯಗೊಂಡವರು.

ಘಟನೆ ವಿವರ:

ಭರತ್ ರಾಜ್ ಗೌಡ ಹಾಗೂ ಸ್ನೇಹಿತ ಧನುಷ್‌ ಶನಿವಾರ ಬೈಕ್‌ ನಲ್ಲಿ ಗಣೇಶೋತ್ಸವ ಶೋಭಾಯಾತ್ರೆಗೆಂದು ಪುತ್ತೂರಿಗೆ ಹೋಗಿ  ಬರುವ ವೇಳೆ ಪರ್ಲಡ್ಕ  ರಸ್ತೆಯಲ್ಲಿ  ಸವಾರನ ನಿಯಂತ್ರಣ ತಪ್ಪಿ ಬೈಕ್‌ ರಸ್ತೆ ಬದಿಯ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಮಂಗಳೂರು ಕಡೆ ಹೋಗುತ್ತಿದ್ದ ಬಸ್ಸಿನ ಹಿಂಬದಿಯ ಭಾಗಕ್ಕೆ ಗುದ್ದಿದೆ. ಪರಿಣಾಮ ಭರತ್‌ ರಾಜ್‌ ತಲೆಗೆ ತೀವ್ರತರದ ಪೆಟ್ಟು ಬಿದ್ದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.  ಬೈಕ್‌ನಲ್ಲಿದ್ದ ಇನ್ನೋರ್ವ ಧನುಷ್ ಅವರು ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಕುಟುಂಬಕ್ಕೆ ಆಧಾರವಾಗಿದ್ದ:

Advertisement

ಐಟಿಐ ಶಿಕ್ಷಣದ ಜೊತೆಗೆ ಅಡಿಕೆ ಸುಳಿಯುವ ಕೆಲಸ ನಿರ್ವಹಿಸುತ್ತಿದ್ದ ಭರತ್‌ ರಾಜ್‌ ಕುಟುಂಬಕ್ಕೆ ಆಧಾರವಾಗಿದ್ದ. ಇದ್ದ ಒಬ್ಬ ಪುತ್ರನನ್ನು ಕಳೆದುಕೊಂಡು ತಂದೆ – ತಾಯಿ ದುಖಃಕ್ಕೊಳಗಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next