Advertisement

ಸಾಗರ: ಅಪರಿಚಿತ ವಾಹನ ಢಿಕ್ಕಿ; ಯುವಕ ಸಾವು

06:32 PM Sep 13, 2022 | Suhan S |

ಸಾಗರ: ಇಲ್ಲಿನ ಜೋಗ ರಸ್ತೆಯ ಪ್ರಗತಿ ಶಾಲೆ ಎದುರಿನ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಅಪರಿಚಿತ ವಾಹನ ಢಿಕ್ಕಿ ಹೊಡೆದು ಬೈಕ್ ಸವಾರ ರಂಜಿತ್ ಕುಮಾರ್ (26) ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಸೋಮವಾರ ರಾತ್ರಿ ನಡೆದಿದೆ.

Advertisement

ಸಾಗರದಲ್ಲಿ ಕಂಪ್ಯೂಟರ್ ಮತ್ತು ಸಿಸಿ ಕ್ಯಾಮರಾ ರಿಪೇರಿ ಮಾಡುವ ಕೆಲಸ ಮಾಡುವ ರಂಜಿತ್ ಕುಮಾರ್ ಸೋಮವಾರ ರಾತ್ರಿ ಕೆಲಸ ಮುಗಿಸಿ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಈ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾರ್ವಜನಿಕರ ಆಕ್ರೋಶ: ಬೈಕ್ ಸವಾರ ರಂಜಿತ್ ಸಾವಿಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಮರ ಕಡಿತಲೆ ಮಾಡಿದ ಗುತ್ತಿಗೆದಾರರೇ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆ ಅಗಲೀಕರಣ ಹಿನ್ನೆಲೆಯಲ್ಲಿ ಇಕ್ಕೆಲಗಳಲ್ಲಿದ್ದ ಮರಗಳನ್ನು ಕಡಿತಲೆ ಮಾಡಿ ಅಲ್ಲಿಯೇ ಬಿಡಲಾಗಿತ್ತು. ರಾತ್ರಿ ಬೈಕ್‌ನಲ್ಲಿ ಮರವನ್ನು ಬಳಸಿಕೊಂಡು ಹೋಗುವಾಗ ಎದುರಿನಿಂದ ಅಪರಿಚಿತ ವಾಹನ ಬಡಿದು ರಂಜಿತ್ ಕುಮಾರ್ ಮೃತಪಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಮರ ಕಡಿತಲೆ ಗುತ್ತಿಗೆ ಹಿಡಿದ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸ್ಥಳದಲ್ಲಿದ್ದ ಸಾರ್ವಜನಿಕರು ಒತ್ತಾಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next