Advertisement

ಗುಂಡ್ಲುಪೇಟೆ: ಖಿನ್ನತೆಗೆ ಒಳಗಾಗಿ ಯುವಕ ಕೆರೆಗೆ ಹಾರಿ ಆತ್ಮಹತ್ಯೆ

06:57 PM Oct 10, 2022 | Team Udayavani |

ಗುಂಡ್ಲುಪೇಟೆ (ಚಾಮರಾಜನಗರ): ಸಾಲದ ಸುಳಿಗೆ ಸಿಲುಕಿದ ಕಾರಣ ಖಿನ್ನತೆಗೆ ಒಳಗಾಗಿ ಯುವಕನೋರ್ವ ಕೆರೆಗೆ ಹಾರಿ ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ತಾಲೂಕಿನ ಶಿವಪುರ ಗ್ರಾಮದ ಕಲ್ಲುಕಟ್ಟೆ ಜಲಾಶಯದಲ್ಲಿ ಸೋಮವಾರ ನಡೆದಿದೆ.

Advertisement

ಕಲ್ಲಹಳ್ಳಿ ಗ್ರಾಮದ ಸಚಿನ್(21) ಮೃತ ಯುವಕನಾಗಿದ್ದು, ಈತ ಖಾಸಗಿ ಫೈನಾನ್ಸ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ. ಸಾಲದ ಸುಳಿಗೆ ಸಿಲುಕಿದ್ದ ಕಾರಣ ಮಾನಸಿಕ ಒತ್ತಡ ತಾಳಲಾರದೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಸ್ಥಳಕ್ಕಾಗಮಿಸಿದ ಗುಂಡ್ಲುಪೇಟೆ ಪೊಲೀಸರು, ಅಗ್ನಿ ಶಾಮಕ ದಳ ಹಾಗೂ ಸ್ಥಳೀಯ ಈಜುಗಾರರ ಸಹಾಯದಿಂದ ಮೃತ ದೇಹ ಮೇಲೆತ್ತಿದ್ದಾರೆ. ನಂತರ ಶವವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ಮರಣೋತ್ತರ ಪರೀಕ್ಷೆ ನಂತರ ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ.

ಈ ಕುರಿತು ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next