Advertisement

ಹಳೆಯ ವೈಷಮ್ಯ ಶಂಕೆ: ಕಲಬುರಗಿ ಮುಖ್ಯರಸ್ತೆಯಲ್ಲಿ ಯುವಕನ ಭೀಕರ ಹತ್ಯೆ

08:28 AM Jun 17, 2021 | Team Udayavani |

ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನೋರ್ವನನ್ನು ಭೀಕರವಾಗಿ ಕೊಲೆಗೈದಿರುವ ಘಟನೆ ಕಳೆದ ರಾತ್ರಿ ನಗರದ ಹಿಂದಿ ಪ್ರಚಾರ ಸಭಾ ಮುಂಭಾಗದ ಮುಖ್ಯ ರಸ್ತೆಯಲ್ಲಿ ನಡೆದಿದೆ.

Advertisement

ರವಿ ಕುಮಾರ್ ಗೋಟೂರ್ ಅಲಿಯಾಸ್ ರವಿ ಪೂಜಾರಿ (30 ವ) ಎಂಬಾತನೇ ಕೊಲೆಯಾದ ವ್ಯಕ್ತಿ. ರವಿ ಕುಮಾರನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮನಸೋ ಇಚ್ಛೆ ಇರಿದು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಕೊಲೆಗೆ ಬಳಸಿದ ಮಾರಕಾಸ್ತ್ರಗಳನ್ನು ಸ್ಥಳದಲ್ಲೇ ಎಸೆದು ಹಂತಕರು ಪರಾರಿಯಾಗಿದ್ದಾರೆ.

ಇದನ್ನೂ ಓದಿ:ಗುಂಪಿನಲ್ಲಿ ಅಲ್ಲ, ಒಬ್ಬೊಬ್ಬರಾಗಿ ಬನ್ನಿ: ಶಾಸಕರಿಗೆ ಅರುಣ್ ಸಿಂಗ್ ತಾಕೀತು

ಕೊಲೆಯಾದ ರವಿ ಕುಮಾರ್  2019ರಲ್ಲಿ ಯುವತಿಯೋರ್ವಳ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ. ಕಳೆದ ಫೆಬ್ರವರಿಯಲ್ಲಿ ಜಾಮೀನಿನ ಮೇಲೆ ಹೊರ ಬಂದಿದ್ದ. ಕಳೆದ ರಾತ್ರಿ ಎರಡು ಗಂಟೆ ಸುಮಾರಿಗೆ ನಡು ರಸ್ತೆಯಲ್ಲೇ ಭೀಕರವಾಗಿ ಕೊಲೆಯಾಗಿದ್ದಾನೆ.

Advertisement

ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Advertisement

Udayavani is now on Telegram. Click here to join our channel and stay updated with the latest news.

Next