Advertisement

YSRTP ಮೈತ್ರಿ; ಡಿ.ಕೆ.ಶಿವಕುಮಾರ್ ಭೇಟಿ ಮಾಡಿದ ವೈ.ಎಸ್.ಶರ್ಮಿಳಾ

03:08 PM May 29, 2023 | Team Udayavani |

ಬೆಂಗಳೂರು: ವೈಎಸ್ಆರ್ ತೆಲಂಗಾಣ ಪಕ್ಷದ ಮುಖ್ಯಸ್ಥೆ ವೈಎಸ್. ಶರ್ಮಿಳಾ ಅವರು ಕೆಪಿಸಿಸಿ ಅಧ್ಯಕ್ಷ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಸೋಮವಾರ ಬೆಂಗಳೂರಿನ ಅವರ ನಿವಾಸದಲ್ಲಿ ಭೇಟಿ ಮಾಡಿದರು. ಶಿವಕುಮಾರ್ ಅವರು ಕರ್ನಾಟಕದ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಇಬ್ಬರ ನಡುವಿನ ಮೊದಲ ಸಭೆ ಇದಾಗಿದೆ.

Advertisement

ಎಎನ್‌ಐ ವರದಿಯ ಪ್ರಕಾರ, ಕಾಂಗ್ರೆಸ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಕ್ಕಾಗಿ ಶರ್ಮಿಳಾ ಈ ಹಿಂದೆ ಶಿವಕುಮಾರ್ ಅವರನ್ನು ಹೊಗಳಿದ್ದರು. ಮೇ 17 ರಂದು, ವೈಎಸ್‌ಆರ್‌ಟಿಪಿ ಅಧ್ಯಕ್ಷೆ ಮುಂಬರುವ 2023 ರ ತೆಲಂಗಾಣ ವಿಧಾನಸಭೆ ಚುನಾವಣೆಗೆ ತಮ್ಮ ಪಕ್ಷ ಮತ್ತು ಕಾಂಗ್ರೆಸ್ ನಡುವಿನ ಮೈತ್ರಿಯ ವದಂತಿಗಳಿಗೆ ಪ್ರತಿಕ್ರಿಯಿಸುತ್ತಾ, “ನಾವು ಯಾರೊಂದಿಗೂ ಮಾತುಕತೆಗೆ ಮುಕ್ತರಾಗಿದ್ದೇವೆ ಏಕೆಂದರೆ ನಮಗೆ ತೆಲಂಗಾಣದಲ್ಲಿ ಮತ್ತೆ ಕೆ ಚಂದ್ರಶೇಖರ್ ರಾವ್ (ಕೆಸಿಆರ್) ಅಧಿಕಾರಕ್ಕೆ ಬರುವುದು ಬೇಡ ಎಂದರು.

“ಇದು ಚುನಾವಣಾ ವರ್ಷ, ಆದ್ದರಿಂದ ಪ್ರತಿ ಪಕ್ಷವು ಎಲ್ಲದಕ್ಕೂ ತಮ್ಮ ಕೈಲಾದಷ್ಟು ಪ್ರಯತ್ನಿಸುತ್ತದೆ, ಆದ್ದರಿಂದ ಇದು ಆಶ್ಚರ್ಯವೇನಿಲ್ಲ” ಎಂದು ಶರ್ಮಿಳಾ ಹೇಳಿದ್ದಾರೆ ಎಂದು ANI ಉಲ್ಲೇಖಿಸಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next