Advertisement

YST Tax ; ಹೆಚ್.ಡಿ. ಕುಮಾರಸ್ವಾಮಿ ಆರೋಪಕ್ಕೆ ರಾಮಲಿಂಗಾ ರೆಡ್ಡಿ ತಿರುಗೇಟು

05:23 PM Aug 05, 2023 | Team Udayavani |

ರಾಮನಗರ: ರಾಜ್ಯದಲ್ಲಿ ವೈಎಸ್ ಟಿ ಟ್ಯಾಕ್ಸ್ ಕುರಿತು ಹೆಚ್.ಡಿ. ಕುಮಾರಸ್ವಾಮಿ ಆರೋಪಕ್ಕೆ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗರೆಡ್ಡಿ ತಿರುಗೇಟು ನೀಡಿದ್ದು, ”ಕುಮಾರಸ್ವಾಮಿ ವಿರೋಧ ಪಕ್ಷದಲ್ಲಿದ್ದಾರೆ.ಅದಕ್ಕಾಗಿ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ.
ನಮ್ಮಲ್ಲಿ ಯಾವ ದಂಧೆಯೂ ಇಲ್ಲ, ಯಾವ ಭ್ರಷ್ಟಾಚಾರವೂ ಇಲ್ಲ.ನಮ್ಮಲ್ಲಿ ಸ್ವಚ್ಚ ಆಡಳಿತ ಇದೆ ”ಎಂದಿದ್ದಾರೆ.

Advertisement

ಪೊಲೀಸ್ ಹಾಗೂ ಸಾರಿಗೆ ಇಲಾಖೆಯಲ್ಲಿ ಸಂಬಳ ವಿಳಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ಒಂದೊಂದು ಇಲಾಖೆಯಲ್ಲಿ ಒಂದೊಂದು ರೀತಿಯ ಕಾರ್ಯವೈಖರಿ ಇದೆ. ನಮ್ಮ ಕೆಎಸ್ಆರ್ ಟಿಸಿಯಲ್ಲಿ 1ನೇ ತಾರೀಕಿಗೆ ಸಂಬಳ ನೀಡಲಾಗುತ್ತೆ. ಬಿಎಂಟಿಸಿಯಲ್ಲಿ 7ನೇ ತಾರೀಕು, ಕಲ್ಯಾಣ ಕರ್ನಾಟಕ ಸಾರಿಗೆಗೆ ಒಂದು ದಿನ ನಿಗದಿ ಮಾಡಲಾಗಿದೆ.ಎಲ್ಲಾ ಇಲಾಖೆಗಳಲ್ಲೂ ಈ ರೀತಿಯ ಸಂಬಳ ನೀಡುತ್ತಾರೆ.ಆದರೆ ಇದರಲ್ಲಿ ರಾಜಕೀಯ ಮಾಡ್ತಿದ್ದಾರೆ” ಎಂದರು.

ಬೊಮ್ಮಾಯಿ ನಮ್ಮ ಸಾರಿಗೆ ಇಲಾಖೆ ಕುರಿತು ಟ್ವೀಟ್ ಮಾಡಿ, ಅರ್ಧ ಸಂಬಳ ಆಂತ ಆರೋಪ ಮಾಡಿದರು. ಆದರೆ ಪೂರ್ಣ ಮಾಹಿತಿ ಇಲ್ಲದೇ ಈ ರೀತಿಯ ಹೇಳಿಕೆ ನೀಡಬಾರದು.ಅವರು ಹಿಂದೆ ಸಿಎಂ ಆಗಿದ್ದವರು.ಅವರ ಅವಧಿಯಲ್ಲಿ ಯಾವರೀತಿ ಸಮಸ್ಯೆ ಆಗಿತ್ತು ಅಂತ ಎಲ್ಲರಿಗೂ ಗೊತ್ತು. ಈಗ ನಮಗೆ ನೀತಿ ಹೇಳೋಕೆ ಬರ್ತಾರೆ ಎಂದು ಆರೋಪಕ್ಕೆ ತಿರುಗೇಟು ನೀಡಿದರು.

ಶಾಸಕರು ಹಾಗೂ ಸಚಿವರ ನಡುವೆ ಅಸಮಾಧಾನ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿ, ಸಣ್ಣಪುಟ್ಟ ಅಸಮಾಧಾನ ಇರುತ್ತೆ, ಇಲ್ಲ ಅಂತ ಏನಿಲ್ಲ.ಆದರೆ ಎಲ್ಲವನ್ನೂ ಕೂತು ಬಗೆಹರಿಸಿಕೊಳ್ಳುತ್ತೇವೆ.ಲೋಕಸಭಾ ಚುನಾವಣೆ ವಿಚಾರವಾಗಿ ಹೈಕಮಾಂಡ್ ನಾಯಕರು ಹಲವು ಸಲಹೆ ನೀಡಿದ್ದಾರೆ.ಗ್ಯಾರಂಟಿ ಜಾರಿ ಯೋಜನೆಗಳ ಸಮರ್ಪಕ ಜಾರಿಗೆ ಸೂಚನೆ ನೀಡಿದ್ದಾರೆ.ಲೋಕಸಭಾ ಚುನಾವಣೆಯ ಪಕ್ಷ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು.ಈ ಕುರಿತು ಹೈಕಮಾಂಡ್ ನಾಯಕರು ಚರ್ಚೆ ಮಾಡಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next