Advertisement

Sandalwood: ಯುವರಾಜ್‌ ಕುಮಾರ್‌ – ಶ್ರೀದೇವಿ ದಾಂಪತ್ಯದಲ್ಲಿ ಬಿರುಕು: ವಿಚ್ಚೇದನಕ್ಕೆ ಅರ್ಜಿ

02:03 PM Jun 10, 2024 | Team Udayavani |

ಬೆಂಗಳೂರು: ಡಾ. ರಾಜ್‌ ಕುಮಾರ್‌ ಕುಟುಂಬದ ಕುಡಿ, ಯುವರಾಜ್‌ ಕುಮಾರ್‌ ದಾಂಪತ್ಯ ಜೀವನದಲ್ಲಿ ಬಿರುಕು ಉಂಟಾಗಿದೆ ಎಂದು ವರದಿಯಾಗಿದೆ.

Advertisement

ರಾಘವೇಂದ್ರ ರಾಜ್‌ ಕುಮಾರ್‌ ಅವರ ಕಿರಿಯ ಮಗ ಯುವರಾಜ್‌(ಗುರು ರಾಜ್‌ ಕುಮಾರ್) ತನ್ನ ಪತ್ನಿ ಜೊತೆಗಿನ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎಂದು ವರದಿ ತಿಳಿಸಿದೆ.

ಕಳೆದ 4 ತಿಂಗಳಿನಿಂದ ಯುವರಾಜ್‌ ಕುಮಾರ್‌ ಹಾಗೂ ಪತ್ನಿ ಶ್ರೀದೇವಿ ಬೇರೆ ಬೇರೆಯಾಗಿದ್ದು, ಇಬ್ಬರ ದಾಂಪತ್ಯದಲ್ಲಿ ಬಿರುಕು ಉಂಟಾಗಿದೆ ಎಂದು ಮೂಲಗಳು ಹೇಳಿವೆ.

ಯುವರಾಜ್‌ ಕುಮಾರ್‌ 2019 ರಲ್ಲಿ ಮೈಸೂರು ಮೂಲದ ಶ್ರೀದೇವಿಯನ್ನು ಪ್ರೀತಿಸಿ ವಿವಾಹವಾಗಿದ್ದರು. ಇದೀಗ ಯುವರಾಜ್‌ ಕುಮಾರ್ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎಂದು ಹೇಳಲಾಗಿದೆ.‌

ಇದು ದೊಡ್ಮನೆ ಕುಟುಂಬದಲ್ಲಿ ಕೇಳಿ ಬಂದ ಮೊದಲ ವಿಚ್ಚೇದನ ಪ್ರಕರಣವಾಗಿದೆ.

Advertisement

ಜೂ.6 ರಂದು ಯುವರಾಜ್‌ ಕುಮಾರ್‌ ಫ್ಯಾಮಿಲಿ ಕೋರ್ಟಿನಲ್ಲಿ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ  ಕೋರ್ಟಿನಿಂದ ಶ್ರೀದೇವಿ ಭೈರಪ್ಪ ಅವರಿಗೆ ನೋಟಿಸ್‌ ಜಾರಿಯಾಗಿದೆ. ಜುಲೈ 4 ರಂದು ಫ್ಯಾಮಿಲಿ ಕೋರ್ಟಿನಲ್ಲಿ ಈ ಬಗ್ಗೆ ವಿಚಾರಣೆ ನಡೆಯಲಿದೆ ಎಂದು ವರದಿಯಾಗಿದೆ.

ಸದ್ಯ ಅಮೆರಿಕಾದಲ್ಲಿರುವ ಶ್ರೀದೇವಿಗೆ ಯುವರಾಜ್‌ ಕುಮಾರ್‌ ವಿಚ್ಚೇದನದ ನೋಟಿಸ್‌ ನೀಡಿದ್ದಾರೆ ಎನ್ನಲಾಗಿದೆ.

ಇತ್ತೀಚೆಗಷ್ಟೇ ಬಂದ ಯುವರಾಜ್‌ ಕುಮಾರ್‌ ಅವರ ʼಯುವʼ ಸಿನಿಮಾದ ಪ್ರಚಾರದ ವೇಳೆಯೂ ಅವರ ಪತ್ನಿ ಶ್ರೀದೇವಿ ಗೈರಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next