Advertisement

“ಸದ್ಯಕ್ಕೆ ನಾನೇನೂ ಮಾತನಾಡುವ ಪರಿಸ್ಥಿತಿಯಲ್ಲಿಲ್ಲ..” ನೋಟಿಸ್ ಬಗ್ಗೆ ಶ್ರೀದೇವಿ ರಿಯಾಕ್ಷನ್

06:31 PM Jun 10, 2024 | Team Udayavani |

ಬೆಂಗಳೂರು: ನಟ ಯುವರಾಜ್‌ ಕುಮಾರ್‌ – ಶ್ರೀದೇವಿ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಲು ಮುಂದಾಗಿದ್ದು, ಯುವರಾಜ್ ಕುಮಾರ್‌ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ.

Advertisement

ಶ್ರೀದೇವಿ ಭೈರಪ್ಪ ಅವರಿಗೆ ನೋಟಿಸ್‌ ಜಾರಿಯಾಗಿದ್ದು, ಈ ಬಗ್ಗೆ ಅವರು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

“ಏನಾಗಿದೆ ಎನ್ನುವುದು ಚಿತ್ರರಂಗ ಹಾಗೂ ಮಾಧ್ಯಮದಲ್ಲಿ ಅನೇರಿಕಗೆ ತಿಳಿದಿದೆ. ಈ ಬಗ್ಗೆ ಬಂದ ಲೀಗಲ್‌ ನೋಟಿಸ್‌ ಗೆ ನಾನು ಈಗಾಗಲೇ ಉತ್ತರಿಸಿದ್ದೇನೆ. ವಿಚ್ಚೇದನ ಪ್ರತಿ ಇನ್ನೂ ಕೂಡ ನನ್ನ ಕೈಗೆ ತಲುಪಿಲ್ಲ. ನೋಟಿಸ್‌ ಸಿಕ್ಕ ಬಳಿಕ ನಾನು ನ್ಯಾಯಾಲಯಕ್ಕೆ ಉತ್ತರಿಸುತ್ತೇನೆ. ಈ ಬಗ್ಗೆ ಸದ್ಯಕ್ಕೆ ನಾನೇನು ಮಾತನಾಡುವ ಸ್ಥಿತಿಯಲಿಲ್ಲ. ಎಲ್ಲರೂ ಈ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳುತ್ತೀರಾ ಎಂದು ಭಾವಿಸುತ್ತೇನೆ” ಎಂದು ಮಾಧ್ಯಮಗಳಿಗೆ ಹೇಳಿದ್ದಾರೆ.

ಜೂ.6 ರಂದು ಯುವರಾಜ್‌ ಕುಮಾರ್‌ ಫ್ಯಾಮಿಲಿ ಕೋರ್ಟಿನಲ್ಲಿ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ  ಕೋರ್ಟಿನಿಂದ ಶ್ರೀದೇವಿ ಭೈರಪ್ಪ ಅವರಿಗೆ ನೋಟಿಸ್‌ ಜಾರಿಯಾಗಿದೆ. ಜುಲೈ 4 ರಂದು ಫ್ಯಾಮಿಲಿ ಕೋರ್ಟಿನಲ್ಲಿ ಈ ಬಗ್ಗೆ ವಿಚಾರಣೆ ನಡೆಯಲಿದೆ ಎಂದು ವರದಿಯಾಗಿದೆ.

ಯುವರಾಜ್‌ ಕುಮಾರ್‌ 2019 ರಲ್ಲಿ ಮೈಸೂರು ಮೂಲದ ಶ್ರೀದೇವಿಯನ್ನು ಪ್ರೀತಿಸಿ ವಿವಾಹವಾಗಿದ್ದರು. ಕಳೆದ ಕೆಲ ತಿಂಗಳಿನಿಂದ ಇಬ್ಬರು ಪ್ರತ್ಯೇಕವಾಗಿ ವಾಸಿಸುತ್ತಿದ್ದರು ಎನ್ನಲಾಗಿದೆ.

Advertisement

ಶ್ರೀದೇವಿ ಉನ್ನತ ಶಿಕ್ಷಣದ ವ್ಯಾಸಂಗಕ್ಕಾಗಿ ಸದ್ಯ ಅಮೆರಿಕಾದಲ್ಲಿ ನೆಲೆಸಿದ್ದಾರೆ ಎನ್ನಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next