Advertisement

ಹರ್ಯಾಣ ಪೊಲೀಸರಿಂದ ಮಾಜಿ ಆಟಗಾರ ಯುವರಾಜ್ ಸಿಂಗ್ ಬಂಧನ!

08:42 AM Oct 18, 2021 | Team Udayavani |

ಚಂಡೀಗಢ: ಮಾಜಿ ಆಟಗಾರ, ಸಿಕ್ಸರ್ ಕಿಂಗ್ ಯುವರಾಜ್ ಸಿಂಗ್ ಅವರನ್ನು ಹರ್ಯಾಣ ಪೊಲೀಸರು ಬಂಧಿಸಿದ್ದಾರೆ. ಬಳಿಕ ಮಧ್ಯಂತರ ಜಾಮೀನಿನ ಮೇಲೆ ಯುವರಾಜ್ ಸಿಂಗ್ ಅವರನ್ನು ಬಿಡುಗಡೆ ಮಾಡಲಾಗಿದೆ.

Advertisement

2020ರಲ್ಲಿ ಲೈವ್ ವಿಡಿಯೋದಲ್ಲಿ ಜಾತಿನಿಂದನೆ ಮಾಡಿದ ಕಾರಣಕ್ಕಾಗಿ ಯುವರಾಜ್ ಸಿಂಗ್ ಅವರನ್ನು ಬಂಧಿಸಲಾಗಿದೆ. 2020ರ ಜೂನ್ ನಲ್ಲಿ ರೋಹಿತ್ ಶರ್ಮಾ ಜೊತೆ ಇನ್ಸ್ಟಾಗ್ರಾಮ್ ಲೈವ್ ವಿಡಿಯೋದಲ್ಲಿ ಯುವರಾಜ್ ಸಿಂಗ್ ಅವರು ಮಾತನಾಡುತ್ತಿದ್ದರು. ಈ ವೇಳೆ ಯುಜುವೇಂದ್ರ ಚಾಹಲ್ ಬಗ್ಗೆ ಮಾತನಾಡುವ ಭರದಲ್ಲಿ ಜಾತಿನಿಂದನೆ ಮಾಡುವಂತಹ ಶಬ್ಧವನ್ನು ಬಳಸಿದ್ದರು. ಬಳಿಕ ಇದು ವಿವಾದವಾದಾಗ ಯುವರಾಜ್ ಕ್ಷಮೆ ಕೇಳಿದ್ದರು.

“ನ್ಯಾಯಾಲಯದ ಆದೇಶದಂತೆ ಯುವರಾಜ್ ಸಿಂಗ್ ಅವರನ್ನು ಬಂಧಿಸಲಾಯಿತು ಮತ್ತು ನಂತರ ಶನಿವಾರ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು” ಎಂದು ಹರಿಯಾಣದ ಹನ್ಸಿಯ ಹಿರಿಯ ಪೊಲೀಸ್ ಅಧಿಕಾರಿ ನಿತಿಕಾ ಗಹ್ಲೌತ್ ತಿಳಿಸಿದರು. ಆದರೆ, ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ರನ್ನು ಬಂಧಿಸಲಾಗಿಲ್ಲ ಎಂದು ಯುವಿ ಅವರ ಪ್ರತಿನಿಧಿ ಶಜ್ಮೀನ್ ಕಾರಾ ಹೇಳಿದ್ದಾರೆ.

ಫೆಬ್ರವರಿಯಲ್ಲಿ ಹರಿಯಾಣದ ದಲಿತ ಕಾರ್ಯಕರ್ತನೊಬ್ಬ ನೀಡಿದ ದೂರಿನ ಮೇರೆಗೆ, ತಾರತಮ್ಯವನ್ನು ನಿಷೇಧಿಸುವ ಉದ್ದೇಶದಿಂದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಆತನನ್ನು ಬಂಧಿಸುವಂತೆ ಕೋರಿತ್ತು. ನ್ಯಾಯಾಲಯದ ಆದೇಶದ ಮೇರೆಗೆ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next