Advertisement

ಕೋವಿಡ್-19 ನಿಯಂತ್ರಣದಲ್ಲಿ ಶೂನ್ಯ ಸಾಧನೆ: ಖಾದರ್‌

11:54 AM May 12, 2020 | Lakshmi GovindaRaj |

ಬೆಂಗಳೂರು: ಕೊರೊನಾ ನಿಯಂತ್ರಣ ವಿಚಾರದಲ್ಲಿ ರಾಜ್ಯ ಸರ್ಕಾರದ ಸಾಧನೆ ಶೂನ್ಯ ಎಂದು ಮಾಜಿ ಸಚಿವ ಯು.ಟಿ.ಖಾದರ್‌ ಆರೋಪಿಸಿದ್ದಾರೆ. ಕಾಂಗ್ರೆಸ್‌ ಭವನದಲ್ಲಿ ಜಂಟಿಸುದ್ದಿಗೋಷ್ಠಿಯಲ್ಲಿ ಮಾತನಾಡಿ,  ಕೊರೊನಾ ನಿಯಂತ್ರಿಸಲು ರಾಜ್ಯದ ಜನತೆ 45 ದಿನಗಳಿಂದಲೂ ಸಹಕಾರ ನೀಡುತ್ತಾ ಬಂದಿದ್ದಾರೆ, ಆದರೆ, 45 ದಿನಗಳಲ್ಲಿ ಸರ್ಕಾರದ ಸಾಧನೆ ಶೂನ್ಯ.

Advertisement

ಕೇಂದ್ರ ಸರ್ಕಾರದ ವ್ಯಾಪ್ತಿಯಲ್ಲಿರುವ ಐಸಿಎಂಆರ್‌ ಈವರೆಗೂ  ರಾಜ್ಯ ಸರ್ಕಾರಕ್ಕೆ ಕೊರೊನಾ ಸೋಂಕಿತ ಪ್ರಕರಣಗಳ ವರದಿ ನೀಡಿಲ್ಲ ಎಂದು ಖಾದರ್‌ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ವರದಿ ನೀಡದ ವಿಚಾರವಾಗಿ ರಾಜ್ಯದ ಅಧಿಕಾರಿಗಳು ಐಸಿಎಂಆರ್‌ಗೆ ಪತ್ರ ಬರೆದಿ ದ್ದಾರೆ. ಸರ್ಕಾರ  ಕೂಡಲೇ ವರದಿ ಪಡೆದು ಬಹಿರಂಗಪಡಿಸದಿದ್ದಲ್ಲಿ, ಕೋರ್ಟ್‌ ಮೂಲಕ ಕಾನೂನು ಹೋರಾಟ ಮುಂದುವರಿಸಲಾಗುವುದು ಎಂದರು ಮಾಜಿ ಸಂಸದ ವಿ.ಎಸ್‌.ಉಗ್ರಪ್ಪ ಮಾತನಾಡಿ, ದೇಶದಲ್ಲಿ ಪೆಟ್ರೋಲ್‌,  ಡೀಸೆಲ್‌ಗೆ 69ರಷ್ಟು ತೆರಿಗೆ ವಿಧಿಸಲಾಗಿದೆ.

ಆದರೆ ಪ್ರಧಾನಿ ಪರಿಹಾರ ನಿಧಿಯಿಂದ ಯಾವ ರಾಜ್ಯಕ್ಕೆ ಎಷ್ಟು ಕೊಡಲಾಗಿದೆ ಎಂದು ಪ್ರಶ್ನಿಸಿದರಲ್ಲದೆ, ರಾಜ್ಯದಿಂದ ಸಂಗ್ರ ಹವಾಗುವ 2ಲಕ್ಷ ಕೋಟಿ ತೆರಿಗೆ ಹಣದಲ್ಲಿ  ರಾಜ್ಯಕ್ಕೆ 50 ಸಾವಿರ ಕೋಟಿ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next