Advertisement

ಝೀಕಾ; ಭಯಬೇಡ, ಎಚ್ಚರಿಕೆ ಇರಲಿ

03:13 PM Nov 04, 2023 | Team Udayavani |

ದೇವನಹಳ್ಳಿ: ಝೀಕಾ ವೈರಸ್‌ಬಗ್ಗೆ ಜಿಲ್ಲೆಯ ಜನ ಆತಂಕ ಪಡಬಾರದು. ವೈರಸ್‌ ಸೋಂಕಿನ ಬಗ್ಗೆ ಭಯ ಬೇಡ, ಎಚ್ಚರವಿರಲಿ ಎಂದು ಆರೋಗ್ಯ ಮತ್ತು ಕುಟುಂಬ ಇಲಾಖೆ ಜನರಿಗೆ ಮಾಹಿತಿ ನೀಡಿದೆ.

Advertisement

ಚಿಕಬಳಾಪುರ ಜಿಲ್ಲೆಯ ಶಿಡ್ಡಘಟ್ಟ ತಾಲೂಕಿನ ತಲಕಾಯಲ ಬೆಟ್ಟದ ವ್ಯಾಪ್ತಿಯಲ್ಲಿ ಝೀಕಾ ವೈರಸ್‌ ಕಾಣಿಸಿಕೊಂಡಿರುವುದರಿಂದ ಆರೋಗ್ಯ ಮತ್ತು ಕುಟುಂಬ ಇಲಾಖೆ ಮುಂಜಾಗ್ರತ ಕ್ರಮ ಚುರುಕಾಗಿ ಕೈಗೊಳ್ಳುತ್ತಿದೆ. ಇಂತಹ ಪ್ರಕರಣ ಬಾರದಂತೆ ಹೆಚ್ಚು ಕ್ರಮ ಕೈಗೊಳ್ಳುತ್ತಿದೆ. ಇದಕ್ಕೆ ಜನರಲ್ಲಿ ಅರಿವು ಮೂಡಿಸುವ ಕಾರ್ಯ ಮುಂದಾಗಿದೆ.

ನಿಗಾ: ಝೀಕಾ ವೈರಸ್‌ ಜಿಲ್ಲೆಯಲ್ಲಿ ಇದುವರೆಗೂ ಪತ್ತೆಯಾಗಿಲ್ಲ. ಜನ ಯಾವುದೇ ಕಾರಣಕ್ಕೂ ಆತಂಕಪಡುವಂತಿಲ್ಲ. ಎಚ್ಚರವಹಿಸಿ, ಸೊಳ್ಳೆಗಳು ಉತ್ಪತ್ತಿಯಾಗದಂತೆ ನೋಡಿಕೊಳ್ಳಬೇಕು. ಮನೆ ಸುತ್ತ ಸ್ವತ್ಛತೆಗೆ ಆದ್ಯತೆ ನೀಡಿ. ಪಕ್ಕದ ಜಿಲ್ಲೆ ಆಗಿರುವುದರಿಂದ ಹೆಚ್ಚಿನ ನಿಗಾವಹಿಸಬೇಕು. ಮಲೇರಿಯಾ, ಡೆಂ à, ಚಿಕೂನ್‌ ಗುನ್ಯಾ, ಹರಡುವ ಸೊಳ್ಳೆಗಳ ನಿಯಂತ್ರಣ ಕ್ರಮಗಳನ್ನೇ ಝೀಕಾ ವೈರಸ್‌ ಹರಡುವ ಸೊಳ್ಳೆಗಳ ನಿಯಂತ್ರಣಕ್ಕೆ ಕಡ್ಡಾಯವಾಗಿ ಪಾಲಿಸಬೇಕು.

ರಕ್ತ ಪರೀಕ್ಷೆ ಮಾಡಿಸಿ: ರೋಗದ ಲಕ್ಷಣ ಸೌಮ್ಯ ಹಾಗೂ ಸಾಧಾರಣ ಸ್ವರೂಪವಾಗಿದ್ದು 2 -7 ದಿನದವರೆಗೆ ಇರುತ್ತದೆ. ಗರ್ಭಿಣಿಯರು ವಿಶೇಷವಾಗಿ ಎಚ್ಚರಿಕೆ ವಹಿಸಬೇಕು. ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುತ್ತದೆ. ಯಾವುದೇ ರೋಗ ಲಕ್ಷಣ ಕಂಡು ಬಂದಲ್ಲಿ ಹತ್ತಿರದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರನ್ನು ಸಂಪರ್ಕಿಸಿ ಎಂದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸ್ವಚ್ಛತೆ ಕಾಪಾಡಿ: ಸೊಳ್ಳೆಗಳು ಸಾಮಾನ್ಯವಾಗಿ ಸಂತಾನೋತ್ಪತ್ತಿ ಮಾಡುವುದು. ಮನೆ ಸುತ್ತಲೂ ನೀರು ನಿಲ್ಲದಂತೆ ಮುಂಜಾಗ್ರತೆ ವಹಿಸಬೇಕು. ಪ್ರತಿಯೊಬ್ಬ ವ್ಯಕ್ತಿಯೂ ಮುನ್ನೆಚ್ಚರಿಕೆ ತೆಗೆದುಕೊಂಡರೆ ವೈರಸ್‌ ಹರಳುವ ಸಾಧ್ಯತೆ ಕಡಿಮೆಯಾಗುತ್ತದೆ. ಝೀಕಾ ವೈರಸ್‌ ತಡೆಗಟ್ಟಲು ನೀರು ಶೇಖರಣ ಪರಿಕರ ಮುಚ್ಚಳದಿಂದ ಮುಚ್ಚಿಡಬೇಕು ಮತ್ತು ವಾರಕೊಮ್ಮೆ ಸ್ವತ್ಛಗೊಳಿಸಿ ಮನೆ ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಪರೀಕ್ಷೆ-ಚಿಕಿತ್ಸೆ ಉಚಿತ: ರೋಗದ ಲಕ್ಷಣ ಕಂಡು ಬಂದವರ ರಕ್ತ ಮಾದರಿ ಹಾಗೂ ಮೂತ್ರದ ಮಾದರಿ ಸಂಗ್ರಹಿಸಿ ಪರೀಕ್ಷಿಸುವ ಮೂಲಕ ಪತ್ತೆ ಹಚ್ಚಬಹುದು.

Advertisement

ಸೋಂಕು ಕಾಣಿಸಿಕೊಂಡವರಿಗೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಲಾಗುವುದು. ಝೀಕಾ ವೈರಸ್‌ ಸೋಂಕಿನ ನಿರ್ದಿಷ್ಟ ಚಿಕಿತ್ಸೆ ಹಾಗೂ ಲಸಿಕೆ ಲಭ್ಯವಿಲ್ಲ. ರೋಗದ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುವುದು. ಮನೆಯಲ್ಲಿಯೇ ಚಿಕಿತ್ಸೆ ಪಡೆಯಬಹುದು. ಸಾಕಷ್ಟು ವಿಶ್ರಾಂತಿ ಪಡೆಯಬಹುದು. ನಿರ್ಜಲೀಕರಣ ತಪ್ಪಿಸಲು ಹೆಚ್ಚು ನೀರಿನ ಅಂಶವುಳ್ಳ ಆಹಾರ ಪದಾರ್ಥ ಬಳಸುವುದು. ಸೋಂಕಿತರು ಬೇರೆಯವರಿಗೆ ರೋಗ ಹರಡದಂತೆ ತಡೆಯಲು ಸೊಳ್ಳೆ ಪರದೆ ಬಳಸಬೇಕು. ಸೊಳ್ಳೆ ಉತ್ಪತ್ತಿತಾಣಗಳನ್ನು ನಾಶಪಡಿಸುವುದು. ಮನೆ ಒಳಾಂಗಣ ಮತ್ತು ಹೊರಾಂಗಣ ಸ್ವತ್ಛವಾಗಿ ಇಡುವುದು ಹೀಗೆ ಅನೇಕ ಮುನ್ನೆಚ್ಚರಿಕೆ ಕ್ರಮ ಕೈಗೊಂಡರೆ ವೈರಸ್‌ ಅನ್ನು ಬರೆದಂತೆ ನೋಡಿಕೊಳ್ಳಬಹುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಅರಿವು ಮೂಡಿಸುತ್ತಿದ್ದಾರೆ.

ಝೀಕಾ ಸೋಂಕಿನ ಲಕ್ಷಣಗಳು ಏನೇನು?: ಕಣ್ಣು ಕೆಂಪಾಗುವಿಕೆ, ತಲೆನೋವು, ಜ್ವರ, ಕೀಲುಗಳಲ್ಲಿ ನೋವು, ಗಂಧೆಯೇಳುವುದು. ಸ್ನಾಯುಗಳಲ್ಲಿ ನೋವು ಕಾಣಿಸಿಕೊಳ್ಳುವುದು. ಇಂತಹ ಲಕ್ಷಣ ಕಾಣಿಸಿಕೊಂಡವರು ತಕ್ಷಣ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ತೆರಳಿ ಚಿಕಿತ್ಸೆ ಪಡೆಯಬೇಕು. ಗರ್ಭಾವಸ್ಥೆಯಲ್ಲಿ ಝೀಕಾ ಸೋಂಕು ಕಾಣಿಸಿಕೊಂಡಲ್ಲಿ ಜನಿಸಿದ ಶಿಶುವಿನ ತಲೆ ಗಾತ್ರದಲ್ಲಿ ಕಡಿಮೆ (ಮೈಕೊ›à ಸೆಫಾಲಿ) ಬೆಳವಣಿಗೆಗೆ ದೋಷ ಕಂಡು ಬರಬಹುದು. ದೇವನಹಳ್ಳಿ ತಾಲೂಕಿನ ವಿಜಯಪುರದಿಂದ ಶಿಡ್ಡಘಟ್ಟಕ್ಕೆ 14 ಕಿ.ಮೀ. ಹಾಗೂ ತಲಕಾಯಲ ಬೆಟ್ಟಕ್ಕೆ 22 ಒಟ್ಟು 36ಕಿ.ಮೀ. ಆಗುತ್ತದೆ. ಅದಕ್ಕಾಗಿ ಹೆಚ್ಚಿನ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ.

ಬೆಂ.ಗ್ರಾಮಾಂತರ ಜಿಲ್ಲೆಯಲ್ಲಿ ಝೀಕಾ ವೈರಸ್‌ ಪತ್ತೆಯಾಗಿಲ್ಲ. ಯಾರಿಗಾದರೂ ಝೀಕಾ ವೈರಸ್‌ ಲಕ್ಷಣ ಕಂಡುಬಂದರೆ ಪ್ರಾಥಮಿಕ ಆರೋಗ್ಯ ಕೇಂದ್ರ, ಸಾರ್ವಜನಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಸೂಕ್ತ ಚಿಕಿತ್ಸೆ ಪಡೆಯಬೇಕು. ಯಾರೂ ಭಯಪಡುವಂತಿಲ್ಲ. – ಸುನೀಲ್‌ ಕುಮಾರ್‌, ಜಿಲ್ಲಾ ಆರೋಗ್ಯಾಧಿಕಾರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ‌

-ಎಸ್.ಮಹೇಶ್‌

Advertisement

Udayavani is now on Telegram. Click here to join our channel and stay updated with the latest news.

Next